ಆಂದೋಲನ ಪುರವಣಿ

ಅನ್ನದಾತರ ಅಂಗಳ : ಕೃಷಿ ಮಾಹಿತಿಗಾಗಿ ರೈತರಿಗೆ ಲಭ್ಯವಿರುವ ಆ್ಯಪ್ ಗಳು

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.

ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.

ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.

ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.

andolanait

Recent Posts

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…

12 mins ago

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…

32 mins ago

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

43 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

1 hour ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

1 hour ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

2 hours ago