ಆಂದೋಲನ ಪುರವಣಿ

ಅನ್ನದಾತರ ಅಂಗಳ : ಕೃಷಿ ಮಾಹಿತಿಗಾಗಿ ರೈತರಿಗೆ ಲಭ್ಯವಿರುವ ಆ್ಯಪ್ ಗಳು

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.

ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.

ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.

ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

2 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

3 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

3 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

3 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

3 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

3 hours ago