ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.
ರೈತರಿಗಾಗಿ ಹಲವಾರು ಆ್ಯಪ್ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.
ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.
ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…