ಆಂದೋಲನ ಪುರವಣಿ

ಅನ್ನದಾತರ ಅಂಗಳ : ಕೃಷಿ ಮಾಹಿತಿಗಾಗಿ ರೈತರಿಗೆ ಲಭ್ಯವಿರುವ ಆ್ಯಪ್ ಗಳು

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.

ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.

ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.

ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.

andolanait

Recent Posts

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

2 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

11 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

12 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

13 hours ago