ಆಂದೋಲನ ಪುರವಣಿ

ಅನ್ನದಾತರ ಅಂಗಳ : ಕೃಷಿ ಮಾಹಿತಿಗಾಗಿ ರೈತರಿಗೆ ಲಭ್ಯವಿರುವ ಆ್ಯಪ್ ಗಳು

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.

ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.

ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.

ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

3 hours ago