ಆಂದೋಲನ ಪುರವಣಿ

ಅನ್ನದಾತರ ಅಂಗಳ : ಕೃಷಿ ಮಾಹಿತಿಗಾಗಿ ರೈತರಿಗೆ ಲಭ್ಯವಿರುವ ಆ್ಯಪ್ ಗಳು

ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.

ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.

ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.

ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago