ಆಂದೋಲನ ಪುರವಣಿ

ಅನ್ನದಾತರ ಅಂಗಳ : ಪಶುಗಳಿಗೆ ಪೂರಕ ಆಹಾರ ‘ಅಜೋಲಾ’

ಮೂಲತಃ ಫರ‌್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.

ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್‌ನಷ್ಟು ಉದ್ದ ಹಾಗೂ ೧1.5 ಮೀಟರ್‌ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6  ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago