ಆಂದೋಲನ ಪುರವಣಿ

ಅನ್ನದಾತರ ಅಂಗಳ : ಪಶುಗಳಿಗೆ ಪೂರಕ ಆಹಾರ ‘ಅಜೋಲಾ’

ಮೂಲತಃ ಫರ‌್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.

ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್‌ನಷ್ಟು ಉದ್ದ ಹಾಗೂ ೧1.5 ಮೀಟರ್‌ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6  ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago