ಮೂಲತಃ ಫರ್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.
ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್ನಷ್ಟು ಉದ್ದ ಹಾಗೂ ೧1.5 ಮೀಟರ್ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6 ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.
ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…