ಮೂಲತಃ ಫರ್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.
ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್ನಷ್ಟು ಉದ್ದ ಹಾಗೂ ೧1.5 ಮೀಟರ್ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6 ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.
ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…