ಆಂದೋಲನ ಪುರವಣಿ

ಅನ್ನದಾತರ ಅಂಗಳ : ಪಶುಗಳಿಗೆ ಪೂರಕ ಆಹಾರ ‘ಅಜೋಲಾ’

ಮೂಲತಃ ಫರ‌್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.

ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್‌ನಷ್ಟು ಉದ್ದ ಹಾಗೂ ೧1.5 ಮೀಟರ್‌ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6  ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.

andolanait

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago