ಆಂದೋಲನ ಪುರವಣಿ

ಅನ್ನದಾತರ ಅಂಗಳ : ಪಶುಗಳಿಗೆ ಪೂರಕ ಆಹಾರ ‘ಅಜೋಲಾ’

ಮೂಲತಃ ಫರ‌್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ.

ಬೆಳೆಯುವುದು ಹೇಗೆ?: ಆರಂಭದಲ್ಲಿ ನೆಲವನ್ನು ಸ್ವಚ್ಛಗೊಳಿಸಿ ಸಮತಟ್ಟಾಗಿಸಬೇಕು. 2.25 ಮೀಟರ್‌ನಷ್ಟು ಉದ್ದ ಹಾಗೂ ೧1.5 ಮೀಟರ್‌ನಷ್ಟು ಅಗಲವಿರುವ ( ರೈತರು ಅಗತ್ಯಕ್ಕೆ ತಕ್ಕಂತೆ ನಿರ್ಮಿಸಿಕೊಳ್ಳಬಹುದು) ಗುಂಡಿ ಅಗೆದು ಒಂದು ಅಂಗುಲದಷ್ಟು ಎತ್ತರಕ್ಕೆ ಮರಳು ಹಾಕಿ, ಇದರ ಮೇಲೆ ತೊಟ್ಟಿಯ ಮೇಲ್ಭಾಗದ ಅಂಚಿನವರೆಗೆ ಬರುವಂತೆ 120 ರಿಂದ 150 ಜೆಸಿಎಂ ಸಿಲ್ಫಾಲಿನ್ ಶೀಟು ಹರಡಬೇಕು. ಬಳಿಕ 30 ರಿಂದ 35 ಕಿಲೋದಷ್ಟು ಫಲವತ್ತಾದ ಮೆತ್ತನೆಯ ಮಣ್ಣನ್ನು ಸಮಾನವಾಗಿ ಅದರ ಮೇಲೆ ಹರಡಬೇಕು. ಬಳಿಕ ಸುಮಾರು 6  ಕಿಲೋದಷ್ಟು ಸಗಣಿಗೆ 40 ಗ್ರಾಂ. ಖನಿಜ ಮಿಶ್ರಣ ಬೆರೆಸಿ ನೀರಿನಲ್ಲಿ ಕಲಸಿದ ಮೇಲೆ ಮಣ್ಣಿನಲ್ಲಿ ಮಿಶ್ರಣ ಮಾಡಬೇಕು. ಸುಮಾರು 7 ರಿಂದ 10 ಸೆಂ.ಮೀ. ಎತ್ತರದ ವರೆಗೆ ನೀರು ಹಾಯಿಸಿ ಅದಕ್ಕೆ 1 ಕೆ.ಜಿ.ಯಷ್ಟು ಅಜೋಲಾ ಕಲ್ಚರ್ ಅಥವಾ ಹೆಪ್ಪನ್ನು ಮೇಲ್ಭಾಗದಿಂದ ಸಮಾನವಾಗಿ ಬೀಳುವಂತೆ ಹಾಕಬೇಕು. ಇಷ್ಟು ಮಾಡಿದ ನಂತರ ಅಜೋಲಾದ ಮೇಲೆ ನೀರನ್ನು ಚಿಮುಕಿಸಬೇಕು. ಇದು ಬಹುಬೇಗನೆ ಬೆಳೆಯಲು ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಪೂರಕ ಆಹಾರ: ಅಜೋಲಾವನ್ನು ಆಕಳು, ಎಮ್ಮೆ, ಕೋಳಿ,ಕುರಿ,ಮೇಕೆ,ಮೊಲ, ಹಂದಿ, ಬಾತುಕೋಳಿ ಮತ್ತು ಮೀನುಗಳಿಗೆ ಪೂರಕ ಆಹಾರವಾಗಿ ಬಳಸಬಹುದು. ಇದರಲ್ಲಿ ಒಟ್ಟು ೬ ತಳಿಗಳಿದ್ದು,. ಅವುಗಳಲ್ಲಿ ಪಿನ್ನಾಟ ಹಾಗೂ ಮೈಕ್ರೋಫಿಲ್ಲಾ ತಳಿಗಳು ಹೆಚ್ಚು ಪ್ರಚಲಿತದಲ್ಲಿವೆ. ಮೈಕ್ರೋ ಫಿಲ್ಲಾ ತಳಿಯನ್ನು ಮೇವಿಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರೈತರು ಬಳಸುತ್ತಿದ್ದಾರೆ. ಇದನ್ನು ವಿಭಿನ್ನ ವಾತಾವರಣದಲ್ಲಿಯೂ ಬೆಳೆಯಬಹುದಾಗಿದೆ.ಅಜೋಲಾವನ್ನು ಹಸಿರು ಗೊಬ್ಬರವಾಗಿಯೂ ಬಳಸಬಹುದು ಎನ್ನುತ್ತಾರೆ ತಜ್ಞರು.

andolanait

Recent Posts

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

30 mins ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

6 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

6 hours ago

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…

6 hours ago

ಮಲ್ಲಳ್ಳಿ ಗ್ರಾಮಕ್ಕಿಲ್ಲ ಮೂಲ ಸೌಕರ್ಯ!

ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…

6 hours ago