ಆಂದೋಲನ ಪುರವಣಿ

ಅನ್ನದಾತರ ಅಂಗಳ : ವಾಯು ಕೃಷಿ ಪದ್ಧತಿ ಆವಿಷ್ಕಾರ

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಹಸಿರು ಆರೋಗ್ಯ’ ಅನಾವರಣ

-ಸುತ್ತೂರು ನಂಜುಂಡ ನಾಯಕ.
ಮಣ್ಣಿನ ನೆರವಿಲ್ಲದೆ ಗಾಳಿಯಲ್ಲಿ ಕೃಷಿ ಮಾಡುವ ಪದ್ಧತಿಯನ್ನು ಸುತ್ತೂರಿನ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಆವಿಷ್ಕಾರಗೊಳಿಸಿದ್ದಾರೆ.
ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಮ್ಮಿಕೊಂಡಿರುವ ಕೃಷಿ ಮೇಳ ವಸ್ತು ಪ್ರದರ್ಶನದ ಆವರಣದಲ್ಲಿ ವಿಜ್ಞಾನಿ ನಿಖಿಲ್ ಅವರು ಮಣ್ಣು ಬಳಸದೆ ಗಾಳಿಯಲ್ಲಿ ತರಕಾರಿ, ಸೊಪ್ಪು ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಒಂದು ಪುಟ್ಟದಾದ ಮಳಿಗೆ ತೆರೆದು, ಕೃಷಿ ಮೇಳಕ್ಕೆ ಬರುವ ಎಲ್ಲರಿಗೂ ಮಣ್ಣು ರಹಿತ ಗಾಳಿಯಿಂದಲೇ ಬೆಳೆಯುವ ತರಕಾರಿ, ಸೊಪ್ಪು ಮತ್ತಿತರ ತೋಟಗಾರಿಕೆ ಬೆಳೆಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಿದ್ದಾರೆ.
ತರಕಾರಿಗಳು,ಸೊಪ್ಪು, ಇನ್ನಿತರ ತೋಟಗಾರಿಕೆ ಬೆಳೆಗಳನ್ನು ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದು,ಇದಕ್ಕಾಗಿ ಅಪಾರ ಪ್ರಮಾಣದ ನೀರು ಬಳಸಿಕೊಂಡು ತೋಟಗಾರಿಕೆ ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮಣ್ಣನ್ನೇ ಬಳಸದೆ ಮತ್ತು ಹೆಚ್ಚು ನೀರನ್ನೂ ಬಳಸದೆ, ಗಾಳಿಯಲ್ಲಿಯೇ ತರಕಾರಿ, ಸೊಪ್ಪು ಬೆಳೆಯಬಹುದೆಂಬುದನ್ನು ವಿಜ್ಞಾನಿಗಳು ಪ್ರಾಯೋಗಿಕವಾಗಿ ನಿರೂಪಿಸಿದ್ದಾರೆ. ಈ ಪದ್ಧತಿಯಿಂದ ಬೆಳೆದ ಹಸಿ ಸೊಪ್ಪನ್ನೆ ಮನುಷ್ಯ ಉಪಯೋಗಿಸಿದರೆ ಆರೋಗ್ಯಕ್ಕೂ ಹೆಚ್ಚು ಅನುಕೂಲ ಎನ್ನುತ್ತಾರೆ ವಿಜ್ಞಾನಿಗಳು.

ವಾಯು ಕೃಷಿಯಲ್ಲಿ ಅನುಸರಿಸಬೇಕಾದದ್ದು: ಕಡಿಮೆ ಪ್ರಮಾಣದ ನೀರಿನಿಂದಲೇ, ರಾಸಾಯನಿಕ ಗೊಬ್ಬರ ಬಳಸದೆ ಉತ್ತಮ ಬೆಳೆ ಪಡೆಯಬಹುದು. ಮನೆಯ ಹೊರಾಂಗಣ ಹಾಗೂ ಅಂಗಳದಲ್ಲೂ ಈ ಪದ್ಧತಿಯನ್ನು ದುಬಾರಿ ವೆಚ್ಚವಿಲ್ಲದೆ ಅನುಸರಿಸಬಹುದು.
ತರಕಾರಿ, ಸೊಪ್ಪು ಬೀಜವನ್ನು ಚಿಕ್ಕದಾದ ಪ್ಲಾಸ್ಟಿಕ್ ಚೀಲದಲ್ಲಿ 5 ಲೀಟರ್ ನೀರಿನಲ್ಲಿ 8 ದಿನ ಬೆಳೆಸಿ ನಂತರ 2 ಗುಂಟೆ ಜಾಗದಲ್ಲಿ ವಾಯು ಕೃಷಿ ಮಾಡಬಹುದು ಎನ್ನುತ್ತಾರೆ ವಿಜ್ಞಾನಿ ನಿಖಿಲ್.
ಇದೇ ರೀತಿ ಮತ್ತೊಂದು ಚಿಕ್ಕ ಮಳಿಗೆಯಲ್ಲಿ ಮೊಳಕೆ ಕಟ್ಟಿದ ಕಾಳುಗಳಿಂದ ಸಸಿ ಮಾಡಿ ತಯಾರಿಸಿದ್ದು, ಈ ಒಂದು ಸಸಿ ಮಡಿಯಿಂದ ಮೊಳಕೆ ಬಂದ 15 ದಿನದ ಸೊಪ್ಪನ್ನು ಹಸಿಹಸಿಯಾಗಿ ಉಪಯೋಗಿಸಿದರೆ ತುಂಬಾ ಆರೋಗ್ಯದಾಯಕ ಎನ್ನುತ್ತಾರೆ ವಿಜ್ಞಾನಿಗಳು.
ಕಾಳುಗಳನ್ನು ಮೊಳಕೆ ಕಟ್ಟಿ ಉಪಯೋಗಿಸಲಾಗುವ ಪದ್ಧತಿ ಹೊಸದೇನಲ್ಲ, ಈಗ ಮೊಳಕೆಯ ಸೊಪ್ಪನ್ನು ಉಪಯೋಗಿಸಿದರೆ ಮನುಷ್ಯನ ಆರೋಗ್ಯಕ್ಕೆ ಬಹಳ ಅನುಕೂಲ, ಮನೆಯವರು ತಮ್ಮ ಕಿಟಕಿ ಬಾಗಿಲುಗಳಲ್ಲಿ ಯಾವುದಾದರೂ ಸಣ್ಣದೊಂದು ತರಕಾರಿ ವೇಸ್ಟ್‌ಕಾಂಪೋಸ್ಟ್ ಮಾಡಿ ಗೊಬ್ಬರ ತಯಾರಿಸಿ ಮೊಳಕೆ ಕಾಳನ್ನು ಕಟ್ಟಿ ಮೊಳಕೆ ಬರುವ ಸೊಪ್ಪನ್ನು ಉಪಯೋಗಿಸಿಕೊಳ್ಳುವ ವಿಧಾನಗಳ ಬಗ್ಗೆ ಕೃಷಿ ವಿಜ್ಞಾನಿಗಳು ಮಾಹಿತಿ ನೀಡುತ್ತಿದ್ದು, ಸಾರ್ವಜನಿಕರು ಈ ಆವಿಷ್ಕಾರದ ಬಗ್ಗೆ ಕೇಳಿ ಚಕಿತಗೊಳ್ಳುತ್ತಿದ್ದಾರೆ.
ಗೃಹಿಣಿಯರು ಹಾಗೂ ಮಕ್ಕಳೂ ಸಹ ಈ ಪದ್ಧತಿಯಿಂದ ಮನೆಯಲ್ಲಿ ಒಂದು ಕುಟುಂಬಕ್ಕೆ ಅಗತ್ಯವಿರುವ ವಿವಿಧ ಬಗೆಯ ಸೊಪ್ಪು ಮತ್ತು ತರಕಾರಿಗಳನ್ನು ಬೆಳೆದುಕೊಳ್ಳಬಹುದು ಎನ್ನುತ್ತಾರೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು.

ವಾಯು ಕೃಷಿಯಲ್ಲಿ ಬೆಳೆದ ಸ್ವಚ್ಛ ಹಸಿರಿನಿಂದ ಕೂಡಿರುವ ತಾಜಾ ಸೊಪ್ಪು, ತರಕಾರಿಗಳನ್ನು ಸ್ಥಳದಲ್ಲೇ ವಾರಾಟಕ್ಕೆ ಸಿದ್ಧಪಡಿಸಿದ್ದಾರೆ. ವಾಯು ಕೃಷಿ ಪದ್ಧತಿಯನ್ನು ತಾವೂ ಸಹ ಅಳವಡಿಸಿಕೊಳ್ಳಬೇಕೆನ್ನುವ ರೈತ ಬಂಧುಗಳು ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳಾದ ನಿಖಿಲ್, ಮೊಬೈಲ್ ಸಂಖ್ಯೆ- ೮೯ ೫೧ ೬೭ ೭೬ ೭೨. ಈ ಮೂಲಕ ಹೆಚ್ಚಿನ ಮಾಹಿತಿ ಪಡೆಯಲು ಕೋರಿದ್ದಾರೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

37 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago