ಆಂದೋಲನ ಪುರವಣಿ

ಅಶ್ವಿನಿ ಪುನೀತ್ ರಾಜ್‍ಕುಮಾರ್, ವಿಜಯ್ ಕಿರಗಂದೂರು, ನಟ ಕುಮಾರ್ ಗೋವಿಂದ್, ತಾರಾಗೆ ‘ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ

ಬೆಂಗಳೂರು :  ಸ್ಯಾಂಡಲ್​ವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗು ಹಿರಿಯ ನಟಿ ತಾರಾ ಅನುರಾಧ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಲಾಗುತ್ತಿದೆ‌.

ಕಳೆದ 47 ವರ್ಷಗಳಿಂದ ಕನ್ನಡ ಸಿನಿಮಾರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯೇ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುದೀರ್ಘಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪದ್ಧತಿ ಆರಂಭಿಸಿದ್ದರು.ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ಕೇವಲ ಎರಡು ಪ್ರಶಸ್ತಿಗಳಿಂದ ಇಂಥದ್ದೊಂದು ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾದ ಇತಿಹಾಸವಿದೆ. ಹೀಗೆ ಆರಂಭವಾದ ಸಮಾರಂಭವೀಗ 11 ಹಾಗು ಮೂರು ವಿಶೇಷ ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಶಸ್ತಿಗೆ ಆಯ್ಕೆಯಾದ ಗಣ್ಯರು: ಪಿ.ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು, ಈಶ್ವರ ದೈತೋಟ – ಹಿರಿಯ ಪತ್ರಕರ್ತರು,‌ ನಟ ಕುಮಾರ್ ಗೋವಿಂದ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ, ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್, ಹಿರಿಯ ನಟಿ ತುಳಸಿ, ಸಂಗೀತ ನಿರ್ದೇಶಕ ನೋಬಿನ್ ಪಾಲ್, ನಿರ್ದೇಶಕ ಮಧುಚಂದ್ರ, ಶ್ರೀನಿವಾಸ ಕಲ್ಯಾಣ ನಿರ್ದೇಶಕ ಎಂ.ಜಿ. ಶ್ರೀನಿವಾಸ್ , 777 ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್, ಗೀತ ರಚನೆಕಾರ ಪ್ರಮೋದ್, ಹಿರಿಯ ಪೋಷಕ ನಟ ಶ್ರೀನಿವಾಸಮೂರ್ತಿ.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

5 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

5 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

5 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

5 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

6 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

6 hours ago