ಬೆಂಗಳೂರು : ಸ್ಯಾಂಡಲ್ವುಡ್ನ ಜನಪ್ರಿಯ ಸಿನಿಮಾ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗು ಹಿರಿಯ ನಟಿ ತಾರಾ ಅನುರಾಧ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಲಾಗುತ್ತಿದೆ.
ಕಳೆದ 47 ವರ್ಷಗಳಿಂದ ಕನ್ನಡ ಸಿನಿಮಾರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯೇ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುದೀರ್ಘಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪದ್ಧತಿ ಆರಂಭಿಸಿದ್ದರು.ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ಕೇವಲ ಎರಡು ಪ್ರಶಸ್ತಿಗಳಿಂದ ಇಂಥದ್ದೊಂದು ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾದ ಇತಿಹಾಸವಿದೆ. ಹೀಗೆ ಆರಂಭವಾದ ಸಮಾರಂಭವೀಗ 11 ಹಾಗು ಮೂರು ವಿಶೇಷ ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಗೆ ಆಯ್ಕೆಯಾದ ಗಣ್ಯರು: ಪಿ.ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು, ಈಶ್ವರ ದೈತೋಟ – ಹಿರಿಯ ಪತ್ರಕರ್ತರು, ನಟ ಕುಮಾರ್ ಗೋವಿಂದ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ, ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್, ಹಿರಿಯ ನಟಿ ತುಳಸಿ, ಸಂಗೀತ ನಿರ್ದೇಶಕ ನೋಬಿನ್ ಪಾಲ್, ನಿರ್ದೇಶಕ ಮಧುಚಂದ್ರ, ಶ್ರೀನಿವಾಸ ಕಲ್ಯಾಣ ನಿರ್ದೇಶಕ ಎಂ.ಜಿ. ಶ್ರೀನಿವಾಸ್ , 777 ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್, ಗೀತ ರಚನೆಕಾರ ಪ್ರಮೋದ್, ಹಿರಿಯ ಪೋಷಕ ನಟ ಶ್ರೀನಿವಾಸಮೂರ್ತಿ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…