ಆಂದೋಲನ ಪುರವಣಿ

ಅಶ್ವಿನಿ ಪುನೀತ್ ರಾಜ್‍ಕುಮಾರ್, ವಿಜಯ್ ಕಿರಗಂದೂರು, ನಟ ಕುಮಾರ್ ಗೋವಿಂದ್, ತಾರಾಗೆ ‘ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ

ಬೆಂಗಳೂರು :  ಸ್ಯಾಂಡಲ್​ವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗು ಹಿರಿಯ ನಟಿ ತಾರಾ ಅನುರಾಧ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಲಾಗುತ್ತಿದೆ‌.

ಕಳೆದ 47 ವರ್ಷಗಳಿಂದ ಕನ್ನಡ ಸಿನಿಮಾರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯೇ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುದೀರ್ಘಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪದ್ಧತಿ ಆರಂಭಿಸಿದ್ದರು.ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ಕೇವಲ ಎರಡು ಪ್ರಶಸ್ತಿಗಳಿಂದ ಇಂಥದ್ದೊಂದು ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾದ ಇತಿಹಾಸವಿದೆ. ಹೀಗೆ ಆರಂಭವಾದ ಸಮಾರಂಭವೀಗ 11 ಹಾಗು ಮೂರು ವಿಶೇಷ ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಶಸ್ತಿಗೆ ಆಯ್ಕೆಯಾದ ಗಣ್ಯರು: ಪಿ.ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು, ಈಶ್ವರ ದೈತೋಟ – ಹಿರಿಯ ಪತ್ರಕರ್ತರು,‌ ನಟ ಕುಮಾರ್ ಗೋವಿಂದ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ, ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್, ಹಿರಿಯ ನಟಿ ತುಳಸಿ, ಸಂಗೀತ ನಿರ್ದೇಶಕ ನೋಬಿನ್ ಪಾಲ್, ನಿರ್ದೇಶಕ ಮಧುಚಂದ್ರ, ಶ್ರೀನಿವಾಸ ಕಲ್ಯಾಣ ನಿರ್ದೇಶಕ ಎಂ.ಜಿ. ಶ್ರೀನಿವಾಸ್ , 777 ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್, ಗೀತ ರಚನೆಕಾರ ಪ್ರಮೋದ್, ಹಿರಿಯ ಪೋಷಕ ನಟ ಶ್ರೀನಿವಾಸಮೂರ್ತಿ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago