ಆಂದೋಲನ ಪುರವಣಿ

ಇಳಿಗಾಲಕ್ಕೆ ಒಳ್ಳೆಯ ಆಹಾರ

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ.

ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ ಮಾಡುವುದರಿಂದ ಹಿರಿಯರು ವೃದ್ಧಾಪ್ಯ ತಲುಪಿದರೂ ಆರೋಗ್ಯ ಸಮ ತೋಲನ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ಅವರು ಒಂದಿಷ್ಟು ಆಹಾರ ಸೇವಿಸುವುದು ಅಗತ್ಯ. ಅವುಗಳೆಂದರೆ…

ಸೇಬು: ನಿತ್ಯ ಒಂದೊಂದು ಸೇಬು ಸೇವನೆ ಮಾಡಿದರೆ ಹಿರಿಯರೂ ವೈದ್ಯರಿಂದ ದೂರವಿರಬಹುದು ಎಂಬುದು ಸುಳ್ಳಲ್ಲ. ರಕ್ತದ ಒತ್ತಡ ಮತ್ತು ಮಧುಮೇಹ ಸಮಸ್ಯೆಯನ್ನು ಸೇಬು ತನ್ನಲ್ಲಿನ ಆಂಟಿ-ಆಕ್ಸಿಡೆಂಟ್ ಮತ್ತು ಕರಗುವ ನಾರಿನ ಅಂಶದಿಂದ ಮತ್ತು ವಿಟಮಿನ್ ‘ಸಿ’ ಅಂಶದಿಂದ ನಿಯಂತ್ರಿಸುತ್ತದೆ.

ಹಸಿರು ಎಲೆ-ತರಕಾರಿಗಳು: ದಂಟಿನ ಸೊಪ್ಪು, ಪಾಲಕ್ ಸೊಪ್ಪು, ಹೂ ಕೋಸು, ಎಲೆ ಕೋಸು, ಬೊಕೋಲಿ ಇತ್ಯಾದಿ ಆಹಾರಗಳು ಹಿರಿಯರ ಮಾನಸಿಕ ಆರೋಗ್ಯ ಹೆಚ್ಚಿಸುತ್ತವೆ.

ಮೀನು: ಮೀನಿನಲ್ಲಿ ಒಮೆಗಾ-3 ಫ್ಯಾಟಿ ಅಂಶಗಳು ಹೆಚ್ಚಾಗಿರುವುದಿಂದ 60 ವರ್ಷ ಮೇಲ್ಪ ಟ್ಟವರಿಗೆ ಹೃದಯ ಮತ್ತು ಮಿದುಳಿನ ಸಮಸ್ಯೆ ಗಳನ್ನು ಪರಿಹಾರ ಮಾಡುವ ಗುಣಲಕ್ಷಣ ಹೊಂದಿವೆ.

ಮೊಟ್ಟೆ: ಮೊಟ್ಟೆಯಲ್ಲಿ ಪ್ರೋಟೀನ್ ಅಂಶ ಯಥೇಚ್ಛವಾಗಿದ್ದು, ದೇಹದ ಮಾಂಸಖಂಡ ಗಳನ್ನು ಬಲಪಡಿಸುವುದಕ್ಕೆ ಸಹಾಯಕವಾಗಿದೆ.

ಕಾಫಿ ಸೇವನೆ: ಹಿರಿಯರಲ್ಲಿ ಹಿತಮಿತವಾದ ಕಾಫಿ ಸೇವನೆಯ ಅಭ್ಯಾಸವಿದ್ದರೆ ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಪಾರ್ಶ್ವ ವಾಯು, ಅಲ್ಟಿಮರ್ ಕಾಯಿಲೆ ಸೇರಿದಂತೆ ಕೆಲವು ಸೋಂಕುಗಳನ್ನು ದೂರಮಾಡಬಹುದು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

3 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

4 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

4 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

4 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

5 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

5 hours ago