ಆಂದೋಲನ ಪುರವಣಿ

ಇಳಿಗಾಲಕ್ಕೆ ಒಳ್ಳೆಯ ಆಹಾರ

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ.

ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ ಮಾಡುವುದರಿಂದ ಹಿರಿಯರು ವೃದ್ಧಾಪ್ಯ ತಲುಪಿದರೂ ಆರೋಗ್ಯ ಸಮ ತೋಲನ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ಅವರು ಒಂದಿಷ್ಟು ಆಹಾರ ಸೇವಿಸುವುದು ಅಗತ್ಯ. ಅವುಗಳೆಂದರೆ…

ಸೇಬು: ನಿತ್ಯ ಒಂದೊಂದು ಸೇಬು ಸೇವನೆ ಮಾಡಿದರೆ ಹಿರಿಯರೂ ವೈದ್ಯರಿಂದ ದೂರವಿರಬಹುದು ಎಂಬುದು ಸುಳ್ಳಲ್ಲ. ರಕ್ತದ ಒತ್ತಡ ಮತ್ತು ಮಧುಮೇಹ ಸಮಸ್ಯೆಯನ್ನು ಸೇಬು ತನ್ನಲ್ಲಿನ ಆಂಟಿ-ಆಕ್ಸಿಡೆಂಟ್ ಮತ್ತು ಕರಗುವ ನಾರಿನ ಅಂಶದಿಂದ ಮತ್ತು ವಿಟಮಿನ್ ‘ಸಿ’ ಅಂಶದಿಂದ ನಿಯಂತ್ರಿಸುತ್ತದೆ.

ಹಸಿರು ಎಲೆ-ತರಕಾರಿಗಳು: ದಂಟಿನ ಸೊಪ್ಪು, ಪಾಲಕ್ ಸೊಪ್ಪು, ಹೂ ಕೋಸು, ಎಲೆ ಕೋಸು, ಬೊಕೋಲಿ ಇತ್ಯಾದಿ ಆಹಾರಗಳು ಹಿರಿಯರ ಮಾನಸಿಕ ಆರೋಗ್ಯ ಹೆಚ್ಚಿಸುತ್ತವೆ.

ಮೀನು: ಮೀನಿನಲ್ಲಿ ಒಮೆಗಾ-3 ಫ್ಯಾಟಿ ಅಂಶಗಳು ಹೆಚ್ಚಾಗಿರುವುದಿಂದ 60 ವರ್ಷ ಮೇಲ್ಪ ಟ್ಟವರಿಗೆ ಹೃದಯ ಮತ್ತು ಮಿದುಳಿನ ಸಮಸ್ಯೆ ಗಳನ್ನು ಪರಿಹಾರ ಮಾಡುವ ಗುಣಲಕ್ಷಣ ಹೊಂದಿವೆ.

ಮೊಟ್ಟೆ: ಮೊಟ್ಟೆಯಲ್ಲಿ ಪ್ರೋಟೀನ್ ಅಂಶ ಯಥೇಚ್ಛವಾಗಿದ್ದು, ದೇಹದ ಮಾಂಸಖಂಡ ಗಳನ್ನು ಬಲಪಡಿಸುವುದಕ್ಕೆ ಸಹಾಯಕವಾಗಿದೆ.

ಕಾಫಿ ಸೇವನೆ: ಹಿರಿಯರಲ್ಲಿ ಹಿತಮಿತವಾದ ಕಾಫಿ ಸೇವನೆಯ ಅಭ್ಯಾಸವಿದ್ದರೆ ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಪಾರ್ಶ್ವ ವಾಯು, ಅಲ್ಟಿಮರ್ ಕಾಯಿಲೆ ಸೇರಿದಂತೆ ಕೆಲವು ಸೋಂಕುಗಳನ್ನು ದೂರಮಾಡಬಹುದು.

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago