ಆಂದೋಲನ ಪುರವಣಿ

ಯೋಗ ಕ್ಷೇಮ: ಮೂಳೆಗೆ ಆಸ್ಟಿಯೊಪೊರೊಸಿಸ್ ಬರದಂತೆ ಕಾಯಿರಿ

ಇಂದು ವಿಶ್ವ ಆಸ್ಟಿಯೊಪೊರೊಸಿಸ್ ದಿನ; ಮೂಳೆಗಳ ಆರೋಗ್ಯದ ಬಗ್ಗೆ ಜಾಗೃತಿ

ವಿ. ವಿನೋಲಿಯಾ ರಾಜ್
ಪ್ರಾಂಶುಪಾಲರು
ವಿದ್ಯಾವಿಕಾಸ ನರ್ಸಿಂಗ್ ಕಾಲೇಜು, ಮೈಸೂರು

ಮಾನವನ ದೇಹದಲ್ಲಿ ೨೦೬ರಿಂದ ೨೧೩ ಮೂಳೆಗಳಿರುತ್ತವೆ. ಇಡೀ ದೇಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಅಸ್ಥಿಪಂಜರ ವ್ಯಕ್ತಿ ಆರೋಗ್ಯದಲ್ಲಿಯೂ ಪ್ರಮುಖವಾದುದು. ಆದರೆ  ಆಸ್ಟಿಯೊಪೊರೊಸಿಸ್ (ಅಸ್ಥಿ ರಂಧ್ರತೆ) ಎಂಬ ರೋಗವು ಹೆಚ್ಚಿನವರನ್ನು ಇಂದು ಕಾಡುತ್ತಿದೆ. ೧೯೭೦ರ ತನಕ ಇದೊಂದು ಕಾಯಿಲೆೆಯೆoದು ಪರಿಗಣಿಸಿಯೇ ಇರದ ಸಮಸ್ಯೆ ಈಗ ಹೆಚ್ಚಾಗುತ್ತಿದೆ. ಮೂಳೆಯ ಸಾಂದ್ರತೆಯು ವಯಸ್ಸಿನೊಂದಿಗೆ ಕಡಿಮೆಯಾಗುವುದು  ಹಾಗೂ ಮೂಳೆ ಮುರಿತದ ಅಪಾಯಕ್ಕೂ ಸಂಬಂಧ ಇದೆ ಎಂಬುದನ್ನು ಜೀನ್ ಲೋಬ್‌ಸ್ಟಿಯುನ್ ಎಂಬ ಫ್ರೆಂಚ್ ವೈದ್ಯ ಮೊದಲ ಬಾರಿಗೆ ತಿಳಿಸಿದ. ಅದರಿಂದ ಈಚೆಗೆ ಈ ಬಗ್ಗೆ ಸಾಕಷ್ಟು ಅಧ್ಯಯನಗಳು ನಡೆದು ಸಮಸ್ಯೆಗೆ ಪರಿಹಾರವನ್ನೂ ಕಂಡುಹಿಡಿಯಲಾಗಿದೆ.

ಆಸ್ಟಿಯೊಪೊರೊಸಿಸ್ ಸೊಸೈಟಿ ಸ್ಥಾಪನೆ

೧೯೮೬ರಂದು ಯುನೈಟೆಡ್ ಕಿಂಗ್‌ಡಂ ಚಾರಿಟಿುಯು ಆಸ್ಟಿಯೊಪೊರೋಸಿಸ್‌ಗೆ ತಪಾಸಣೆ, ನಿಯoತ್ರಣ ಹಾಗೂ ಚಿಕಿತ್ಸೆ ನೀಡಲು ತೀರ್ಮಾನಿಸಿ ನ್ಯಾಷನಲ್ ಆಸ್ಟಿಯೊ ಪೊರೋಸಿಸ್ ಸೊಸೈಟಿಯನ್ನು ಸ್ಥಾಪಿಸಿತು. ಮೂಳೆಯ ಆರೋಗ್ಯವನ್ನು ಹೆಚ್ಚಿಸಲು, ಆಸ್ಟಿಯೊಪೊರೋಸಿಸ್‌ಗೆ ತುತ್ತಾದವರ ಜೀವನವನ್ನು ಸುಧಾರಿಸಲು ಹಾಗೂ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇದು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಜೊತೆಗೆ ಅ. ೨೦ ರಂದು ಇಂದು ವಿಶ್ವ ಆಸ್ಟಿಯೊಪೊರೊಸಿಸ್ ದಿನವನ್ನು ಆಚರಣೆ ಮಾಡುತ್ತಾ ಜನರಲ್ಲಿ ಅರಿವು ಮೂಡಿಸುತ್ತಿದೆ.

ರೋಗದ ಪ್ರಮುಖ ಮಾಹಿತಿ
* ಆಸ್ಟಿಯೊಪೊರೋಸಿಸ್ (ಅಸ್ಥಿರಂಧ್ರತೆ) ಮೂಳೆಗೆ ಸಂಬಂಧಿಸಿದ ರೋಗವಾಗಿದ್ದು, ಮೂಳೆಗಳು ಮುರಿಯುವ ಅಥವಾ ಬಿರುಕು ಬಿಡುವ ಸಾಧ್ಯತೆಗಳು ಹೆಚ್ಚು.

* ಮೂಳೆಯ ಖನಿಜಾಂಶಗಳ ಸಾಂದ್ರತೆ ಕ್ಷೀಣಗೊಂಡು, ಮೂಳೆಯ ಸೂಕ್ಷ್ಮರಚನೆಯಲ್ಲಿ ವ್ಯತ್ಯಾಸವಾಗಿ ನೋವು ಕಾಣಿಸಿಕೊಳ್ಳುತ್ತದೆ.

* ಮೂಳೆಯಲ್ಲಿ ಕೊಲಾಜೆನಸ್ ಅಲ್ಲದ ಇತರೆ ವಿಭಿನ್ನ ಪ್ರೊಟೀನ್‌ಗಳ ಪ್ರವಾಣದಲ್ಲಿ ವ್ಯತ್ಯಾಸವಾಗುತ್ತದೆ.

* ಋತುಬಂಧ ಹಂತ ದಾಟಿದ ಮಹಿಳೆಯರಲ್ಲಿ ಕಂಡುಬರುವ ಆಸ್ಟಿಯೊಪೊರೋಸಿಸ್ ಅನ್ನು ಪೋಸ್ಟ್‌ಮೆನೋಪಾಸ್ ಆಸ್ಟಿಯೊಪೊರೋಸಿಸ್ ಎಂದು ಕರೆಯಲಾಗುತ್ತದೆ, ಇದು ಪುರುಷರಲ್ಲಿಯೂ ಕಂಡುಬರಬಹುದು.

* ಕೆಲವು ನಿರ್ದಿಷ್ಟ ಹಾರ್ಮೋನುಗಳ ವ್ಯತ್ಯಯದಿಂದಾಗಿ ಮತ್ತು ಇತರೆ ತೀವ್ರ ಸ್ವರೂಪದ ರೋಗಗಳು ಅಥವಾ ಔಷಧಗಳ ಅಡ್ಡ ಪರಿಣಾಮಗಳಿಂದಲೂ ಈ ಸಮಸ್ಯೆ ಬರಬಹುದು.

* ಗ್ಲೂಕೊಕಾರ್ಟಿಕಾ್ಂಡ್‌ಗಳ ವ್ಯತ್ಯಯದಿಂದಾಗಿ ಬರುವ ಈ ರೋಗಕ್ಕೆ ಸ್ಟೀರಾ್ಂಡ್- ಅಥವಾ ಗ್ಲೂಕೊಕಾರ್ಟಿಕಾ್ಂಡ್-ಇಂಡ್ಯೂಸ್ಡ್ ಆಸ್ಟಿಯೊಪೊರೋಸಿಸ್ ಎಂದು ಕರೆಯಲಾಗುತ್ತದೆ.

* ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದರಿಂದ ಮತ್ತು ಕೆಲವು ಬಾರಿ ಔಷಧಗಳ ಸಹಾಯದಿಂದ ಆಸ್ಟಿಯೊಪೊರೋಸಿಸ್ ಬರದಂತೆ ತಡೆಯಬಹುದಾಗಿದೆ.

* ಸೂಕ್ತ ವ್ಯಾಯಾಮ, ಕ್ಯಾಲ್ಸಿಯo, ಎ ಜೀವಸತ್ವ, ಬಿಸ್‌ಫಾಸ್ಪೋನೇಟ್‌ಗಳು ಹಾಗೂ ಇನ್ನಿತರೆ ಔಷಧಗಳ ಸರಿಯಾದ ಬಳಕೆಯಿಂದ ರೋಗದ ನಿಯಂತ್ರಣ ಸಾಧ್ಯ.

ಜೀವನ, ಆಹಾರ ಶೈಲಿ ಹೀಗಿರಲಿ

ಅಸ್ಥಿರಂಧ್ರ ಸಮಸ್ಯೆ ಬಾರದ ರೀತಿ ನೋಡಿಕೊಳ್ಳಬೇಕಾದರೆ ನಮ್ಮ ಜೀವನ ಮತ್ತು ಆಹಾರ ಕ್ರಮ ಪ್ರಮುಖ ಪಾತ್ರ ವಹಿಸುತ್ತವೆ. ನಿಗದಿತ ವ್ಯಾಯಾಮ, ಉತ್ತಮ ಆಹಾರ ಸೇವನೆ ಎರಡು ಮುಖ್ಯ.

* ಮದ್ಯಪಾನ, ಧೂಮಪಾನವನ್ನು ನಿಲ್ಲಿಸುವುದು ಅಸ್ತಿರಂಧ್ರ ಸಮಸ್ಯೆಯಿಂದ ಹೊರಬರಲು ಸಹಾಯ ವಾಡುತ್ತದೆ.
* ಬೆಲ್ಲದಿಂದ ಮಾಡಿದ ಪದಾರ್ಥಗಳು, ತಾಂಬೂಲ ಸೇವನೆ ಪರಿಣಾಮಕಾರಿ. ಇದರಿಂದ ದೇಹಕ್ಕೆ ಕ್ಯಾಲ್ಸಿಯಂ ಪೂರೈಕೆಯಾಗುತ್ತದೆ.

* ರಾಗಿ, ಸೊಪ್ಪಿನಿಂದ ಮಾಡಿದ ಆಹಾರ, ಧಾನ್ಯಗಳು, ಹಾಲಿನ ಬಳಕೆ ಮಾಡುವುದು ಸೂಕ್ತ.

* ಕಡಿಮೆ ಪ್ರಮಾಣದ ದೈಹಿಕ ಚಟುವಟಿಕೆ, ಅತಿಯಾದ ವ್ಯಾಯಾಮದಿಂದಲೂ ಸಮಸ್ಯೆ.

* ೬೫ ವರ್ಷ ಮೇಲ್ಪಟ್ಟವರು ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿ ಸೂಕ್ತ ಔಷಧ ತೆಗೆದುಕೊಳ್ಳುವುದು ಉತ್ತಮ.

andolanait

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago