ಆಂದೋಲನ ಪುರವಣಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ.

ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ ರಕ್ಷಿಸಬಹುದು. ಹಾಗಾದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬುದು ಹೇಗೆ ತಿಳಿಯುತ್ತದೆ? ದೇಹ ನಮಗೆ ನೀಡುವ ಸೂಚನೆಗಳೇನು ತಿಳಿದುಕೊಳ್ಳಿ. ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ. ಇವು ಕಡಿಮೆ ಆದಲ್ಲಿ ನಾನಾ ರೀತಿಯ ರೋಗಗಳು ಬರುತ್ತದೆ. ಸಾಮಾನ್ಯ ವಾಗಿ ರೋಗನಿರೋಧಕ ಶಕ್ತಿಯನ್ನು ನಾವು ಸೇವನೆ ಮಾಡುವ ಆಹಾರಗಳಿಂದ ಪಡೆದು ಕೊಳ್ಳಬಹುದು. ಆದರೆ ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಆರೋಗ್ಯಕರ ಆಹಾರಗಳ ಸೇವನೆ ಕಡಿಮೆಯಾಗಿದೆ, ಜಂಕ್ ಫುಡ್ ಸೇವನೆ ಹೆಚ್ಚಾಗಿದೆ. ಈ ರೀತಿಯ ಆಹಾರ ಪದ್ಧತಿಯನ್ನು ಅನುಸರಿಸುವುದು ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿ ಕೊಂಡಂತೆ. ಹಾಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಾವು ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು.

■ ಬೆಟ್ಟದ ನೆಲ್ಲಿಕಾಯಿಯನ್ನು ಜೇನು ತುಪ್ಪದಲ್ಲಿ ನೆನೆಸಿ ಒಂದು ಚಮಚ ಪ್ರತಿದಿನ ಬೆಚ್ಚನೆ ನೀರಿನಲ್ಲಿ ಹಾಕಿ ಕುಡಿಯಿರಿ

■ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿರುವಂತಹ ಹಣ್ಣುಗಳು ಅಂದರೆ ಕಿತ್ತಳೆ, ಮೂಸಂಬಿಯನ್ನು ಹೆಚ್ಚಾಗಿ ಸೇವನೆ ಮಾಡಿ

■ ಅದರ ಜೊತೆಗೆ ಪ್ರತಿನಿತ್ಯ ನಿಂಬೆಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇವನೆ ಮಾಡುವುದನ್ನು ಮರೆಯಬೇಡಿ

■ ವಿಟಮಿನ್ ‘ಡಿ’ ಇರುವಂತಹ ಆಹಾರಗಳನ್ನು ತಿನ್ನಿ

■ ಜೊತೆಗೆ ಪ್ರತಿನಿತ್ಯ ಹತ್ತರಿಂದ ಹದಿನೈದು ನಿಮಿಷವಾದರೂ ಸೂರ್ಯನ ಎಳೆ ಬಿಸಿಲಿನಲ್ಲಿ ಸಮಯ ಕಳೆಯಿರಿ

■ ಪ್ರೊ ಬಯೋಟಿಕ್ಸ್ ಅಂಶ ಹೆಚ್ಚಾಗಿರುವ ಮೊಸರು, ಮಜ್ಜಿಗೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡಿ

■ ನಿತ್ಯ ಅರಿಶಿನ ಹಾಕಿದ ಹಾಲನ್ನು ಕುಡಿಯಿರಿ

■ ನಿತ್ಯ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ; ದಿನ ೮ ಗಂಟೆ ನಿದ್ದೆ ಮಾಡಿ

■ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳಿ

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

7 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

10 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

13 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

16 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

16 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

16 hours ago