ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ.
ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ ರಕ್ಷಿಸಬಹುದು. ಹಾಗಾದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬುದು ಹೇಗೆ ತಿಳಿಯುತ್ತದೆ? ದೇಹ ನಮಗೆ ನೀಡುವ ಸೂಚನೆಗಳೇನು ತಿಳಿದುಕೊಳ್ಳಿ. ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ. ಇವು ಕಡಿಮೆ ಆದಲ್ಲಿ ನಾನಾ ರೀತಿಯ ರೋಗಗಳು ಬರುತ್ತದೆ. ಸಾಮಾನ್ಯ ವಾಗಿ ರೋಗನಿರೋಧಕ ಶಕ್ತಿಯನ್ನು ನಾವು ಸೇವನೆ ಮಾಡುವ ಆಹಾರಗಳಿಂದ ಪಡೆದು ಕೊಳ್ಳಬಹುದು. ಆದರೆ ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಆರೋಗ್ಯಕರ ಆಹಾರಗಳ ಸೇವನೆ ಕಡಿಮೆಯಾಗಿದೆ, ಜಂಕ್ ಫುಡ್ ಸೇವನೆ ಹೆಚ್ಚಾಗಿದೆ. ಈ ರೀತಿಯ ಆಹಾರ ಪದ್ಧತಿಯನ್ನು ಅನುಸರಿಸುವುದು ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿ ಕೊಂಡಂತೆ. ಹಾಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಾವು ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು.
■ ಬೆಟ್ಟದ ನೆಲ್ಲಿಕಾಯಿಯನ್ನು ಜೇನು ತುಪ್ಪದಲ್ಲಿ ನೆನೆಸಿ ಒಂದು ಚಮಚ ಪ್ರತಿದಿನ ಬೆಚ್ಚನೆ ನೀರಿನಲ್ಲಿ ಹಾಕಿ ಕುಡಿಯಿರಿ
■ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿರುವಂತಹ ಹಣ್ಣುಗಳು ಅಂದರೆ ಕಿತ್ತಳೆ, ಮೂಸಂಬಿಯನ್ನು ಹೆಚ್ಚಾಗಿ ಸೇವನೆ ಮಾಡಿ
■ ಅದರ ಜೊತೆಗೆ ಪ್ರತಿನಿತ್ಯ ನಿಂಬೆಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇವನೆ ಮಾಡುವುದನ್ನು ಮರೆಯಬೇಡಿ
■ ವಿಟಮಿನ್ ‘ಡಿ’ ಇರುವಂತಹ ಆಹಾರಗಳನ್ನು ತಿನ್ನಿ
■ ಜೊತೆಗೆ ಪ್ರತಿನಿತ್ಯ ಹತ್ತರಿಂದ ಹದಿನೈದು ನಿಮಿಷವಾದರೂ ಸೂರ್ಯನ ಎಳೆ ಬಿಸಿಲಿನಲ್ಲಿ ಸಮಯ ಕಳೆಯಿರಿ
■ ಪ್ರೊ ಬಯೋಟಿಕ್ಸ್ ಅಂಶ ಹೆಚ್ಚಾಗಿರುವ ಮೊಸರು, ಮಜ್ಜಿಗೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡಿ
■ ನಿತ್ಯ ಅರಿಶಿನ ಹಾಕಿದ ಹಾಲನ್ನು ಕುಡಿಯಿರಿ
■ ನಿತ್ಯ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ; ದಿನ ೮ ಗಂಟೆ ನಿದ್ದೆ ಮಾಡಿ
■ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳಿ
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…