ಆಂದೋಲನ ಪುರವಣಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ.

ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ ರಕ್ಷಿಸಬಹುದು. ಹಾಗಾದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬುದು ಹೇಗೆ ತಿಳಿಯುತ್ತದೆ? ದೇಹ ನಮಗೆ ನೀಡುವ ಸೂಚನೆಗಳೇನು ತಿಳಿದುಕೊಳ್ಳಿ. ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ. ಇವು ಕಡಿಮೆ ಆದಲ್ಲಿ ನಾನಾ ರೀತಿಯ ರೋಗಗಳು ಬರುತ್ತದೆ. ಸಾಮಾನ್ಯ ವಾಗಿ ರೋಗನಿರೋಧಕ ಶಕ್ತಿಯನ್ನು ನಾವು ಸೇವನೆ ಮಾಡುವ ಆಹಾರಗಳಿಂದ ಪಡೆದು ಕೊಳ್ಳಬಹುದು. ಆದರೆ ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಆರೋಗ್ಯಕರ ಆಹಾರಗಳ ಸೇವನೆ ಕಡಿಮೆಯಾಗಿದೆ, ಜಂಕ್ ಫುಡ್ ಸೇವನೆ ಹೆಚ್ಚಾಗಿದೆ. ಈ ರೀತಿಯ ಆಹಾರ ಪದ್ಧತಿಯನ್ನು ಅನುಸರಿಸುವುದು ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿ ಕೊಂಡಂತೆ. ಹಾಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಾವು ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು.

■ ಬೆಟ್ಟದ ನೆಲ್ಲಿಕಾಯಿಯನ್ನು ಜೇನು ತುಪ್ಪದಲ್ಲಿ ನೆನೆಸಿ ಒಂದು ಚಮಚ ಪ್ರತಿದಿನ ಬೆಚ್ಚನೆ ನೀರಿನಲ್ಲಿ ಹಾಕಿ ಕುಡಿಯಿರಿ

■ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿರುವಂತಹ ಹಣ್ಣುಗಳು ಅಂದರೆ ಕಿತ್ತಳೆ, ಮೂಸಂಬಿಯನ್ನು ಹೆಚ್ಚಾಗಿ ಸೇವನೆ ಮಾಡಿ

■ ಅದರ ಜೊತೆಗೆ ಪ್ರತಿನಿತ್ಯ ನಿಂಬೆಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇವನೆ ಮಾಡುವುದನ್ನು ಮರೆಯಬೇಡಿ

■ ವಿಟಮಿನ್ ‘ಡಿ’ ಇರುವಂತಹ ಆಹಾರಗಳನ್ನು ತಿನ್ನಿ

■ ಜೊತೆಗೆ ಪ್ರತಿನಿತ್ಯ ಹತ್ತರಿಂದ ಹದಿನೈದು ನಿಮಿಷವಾದರೂ ಸೂರ್ಯನ ಎಳೆ ಬಿಸಿಲಿನಲ್ಲಿ ಸಮಯ ಕಳೆಯಿರಿ

■ ಪ್ರೊ ಬಯೋಟಿಕ್ಸ್ ಅಂಶ ಹೆಚ್ಚಾಗಿರುವ ಮೊಸರು, ಮಜ್ಜಿಗೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡಿ

■ ನಿತ್ಯ ಅರಿಶಿನ ಹಾಕಿದ ಹಾಲನ್ನು ಕುಡಿಯಿರಿ

■ ನಿತ್ಯ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ; ದಿನ ೮ ಗಂಟೆ ನಿದ್ದೆ ಮಾಡಿ

■ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳಿ

ಆಂದೋಲನ ಡೆಸ್ಕ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

11 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago