ಸುಟ್ಟಗಾಯಗಳಾದಾಗ ಏನು ಮಾಡಬೇಕು?
ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.
ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.
ಏನೇನು ಮಾಡಬಾರದು
* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.
* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.
* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.
* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.
* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.
ಪ್ರಥಮ ಚಿಕಿತ್ಸೆ
* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.
* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.
* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.
* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.
* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.
* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.
* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…