ಸುಟ್ಟಗಾಯಗಳಾದಾಗ ಏನು ಮಾಡಬೇಕು?
ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.
ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.
ಏನೇನು ಮಾಡಬಾರದು
* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.
* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.
* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.
* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.
* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.
ಪ್ರಥಮ ಚಿಕಿತ್ಸೆ
* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.
* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.
* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.
* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.
* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.
* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.
* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…