ಆಂದೋಲನ ಪುರವಣಿ

ಸುಟ್ಟಗಾಯಗಳಾದಾಗ ಏನು ಮಾಡ್ಬೇಕು ? ಏನು ಮಾಡ್ಬಾರ್ದು ? ಪ್ರಥಮ ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ!

ಸುಟ್ಟಗಾಯಗಳಾದಾಗ ಏನು ಮಾಡಬೇಕು?

ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.

ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.

ಏನೇನು ಮಾಡಬಾರದು

* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.

* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.

* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.

* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.

* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.

ಪ್ರಥಮ ಚಿಕಿತ್ಸೆ

* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.

* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.

* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.

* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.

* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.

* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.

* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago