ಆಂದೋಲನ ಪುರವಣಿ

ಸುಟ್ಟಗಾಯಗಳಾದಾಗ ಏನು ಮಾಡ್ಬೇಕು ? ಏನು ಮಾಡ್ಬಾರ್ದು ? ಪ್ರಥಮ ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ!

ಸುಟ್ಟಗಾಯಗಳಾದಾಗ ಏನು ಮಾಡಬೇಕು?

ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.

ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.

ಏನೇನು ಮಾಡಬಾರದು

* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.

* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.

* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.

* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.

* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.

ಪ್ರಥಮ ಚಿಕಿತ್ಸೆ

* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.

* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.

* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.

* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.

* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.

* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.

* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

23 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago