ಆಂದೋಲನ ಪುರವಣಿ

ಸುಟ್ಟಗಾಯಗಳಾದಾಗ ಏನು ಮಾಡ್ಬೇಕು ? ಏನು ಮಾಡ್ಬಾರ್ದು ? ಪ್ರಥಮ ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ!

ಸುಟ್ಟಗಾಯಗಳಾದಾಗ ಏನು ಮಾಡಬೇಕು?

ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.

ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.

ಏನೇನು ಮಾಡಬಾರದು

* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.

* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.

* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.

* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.

* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.

ಪ್ರಥಮ ಚಿಕಿತ್ಸೆ

* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.

* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.

* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.

* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.

* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.

* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.

* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

andolanait

Recent Posts

Voting | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ.56.81, ಪ.ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ…

17 mins ago

SSLC RESULTS : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ; ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ…

33 mins ago

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

1 hour ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

2 hours ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

2 hours ago