ಆಂದೋಲನ ಪುರವಣಿ

ಸುಟ್ಟಗಾಯಗಳಾದಾಗ ಏನು ಮಾಡ್ಬೇಕು ? ಏನು ಮಾಡ್ಬಾರ್ದು ? ಪ್ರಥಮ ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ!

ಸುಟ್ಟಗಾಯಗಳಾದಾಗ ಏನು ಮಾಡಬೇಕು?

ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ.

ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ ಮಾಂಸ ಖಂಡಗಳಿಗೆ ತೊಂದರೆ ಆಗುತ್ತದೆ. ನಾವು ನಿತ್ಯವೂ ಕೆಲಸ ಮಾಡುವ ಸ್ಥಳಗಳಲ್ಲಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಅಗತ್ಯ. ಒಂದು ವೇಳೆ ಗಾಯ ಆದರೆ ಸೂಕ್ತ ಪ್ರಥಮ ಚಿಕಿತ್ಸೆ ತೆಗೆದುಕೊಳ್ಳುವುದೂ ಮುಖ್ಯ.

ಏನೇನು ಮಾಡಬಾರದು

* ಸೂಕ್ತ ತಿಳುವಳಿಕೆ ಇಲ್ಲದೇ ಯಾವುದೇ ಬಗೆಯ ಮುಲಾಮು, ಲೊಷನ್ ಅಥವಾ ಎಣ್ಣೆಯನ್ನು ಹಚ್ಚಬಾರದು.

* ಸುಟ್ಟ ಭಾಗಕ್ಕೆ ಯಾವುದೇ ಕಾರಣಕ್ಕೂ ಬೆಣ್ಣೆ, ಹಿಟ್ಟು ಅಥವಾ ಬೇಕಿಂಗ್ ಸೋಡಾವನ್ನು ಹಚ್ಚಬಾರದು.

* ಬೊಬ್ಬೆಗಳು ಬಂದಿದ್ದರೆ ಅವನ್ನು ತೂತು ಮಾಡುವುದು ಅಥವಾ ಒಡೆಯುವುದು ಮಾಡಕೂಡದು.

* ಗಾಯಕ್ಕೆ ಕೊಳಕು ಬಟ್ಟೆ ತಾಗಿಸಬಾರದು. ಗಾಯವಾದ ಭಾಗವನ್ನು ಆಗಾಗ ಮುಟ್ಟುವುದು ಬೇಡ.

* ಕಾಟನ್ ಬಟ್ಟೆಗೆ ಬದಲಾಗಿ ಬೇರೆಯ ಬಟ್ಟೆಗಳನ್ನು ಬಳಸುವುದು ಬೇಡ.

ಪ್ರಥಮ ಚಿಕಿತ್ಸೆ

* ಸುಟ್ಟ ಗಾಯದ ಭಾಗವನ್ನು ತೆಳುವಾಗಿ ಸುರಿಯುತ್ತಿರುವ ತಣ್ಣೀರಿನ ನಲ್ಲಿಯ ಮೇಲೆ ಹಿಡಿಯಿರಿ.

* ಗಾಯವಾದ ಭಾಗವನ್ನು ತಣ್ಣೀರಿನಲ್ಲಿ ಅದ್ದುವುದು ಅಥವಾ ಕೆಲ ಹೊತ್ತು ಶುದ್ಧವಾದ ತಣ್ಣೀರಿನಲ್ಲಿ ಮುಳುಗಿಸಬೇಕು.

* ಶುಚಿಯಾದ ಬಟ್ಟೆ ಇಲ್ಲವೆ ಮೃದುವಾದ ವಸ್ತುವನ್ನು ನೀರಿನಲ್ಲಿ ಅದ್ದಿ ಗಾಯದ ಮೇಲೆ ಬಲವಾಗಿ ಒತ್ತಬೇಕು.

* ತಣ್ಣೀರ ಬಳಕೆಯಿಂದ ಸುಟ್ಟ ದೇಹದ ಭಾಗದ ಉಷ್ಣತೆ ಕಡಿಮೆಯಾಗಿ ಚರ್ಮ ಕೆಂಪಾಗುವುದು, ಬೊಬ್ಬೆಬರುವುದು ಮತ್ತು ನೋವು ಕಡಿಮೆಯಾಗುತ್ತದೆ.

* ಗಾಯವಾದ ಭಾಗವನ್ನು ತೆಳು ಬಿಸಿಲಿನಲ್ಲಿ ಒಣಗಿಸಬೇಕು. ನಂತರ ಕಾಟನ್ ಬಟ್ಟೆಯಿಂದ ಡ್ರೆಸ್ಸಿಂಗ್ ಮಾಡುವುದು ಸೂಕ್ತ.

* ಮಂಜುಗಡ್ಡೆಯನ್ನು ಕಾಟನ್ ಬಟ್ಟೆಯಲ್ಲಿ ಸುತ್ತಿ ಗಾಯವಾದ ಭಾಗದ ಮೇಲೆ ಇಡಬೇಕು.

* ಗಾಯ ಮತ್ತು ಗಾಯದ ತೀವ್ರತೆಯನ್ನು ಆಧರಿಸಿ ವೈದ್ಯರನ್ನು ಭೇಟಿ ಮಾಡುವುದು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

11 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago