ಆಂದೋಲನ ಪುರವಣಿ

ಬಾಳಿಗೆ ಬೆಳಕಾದ ಏಲಕ್ಕಿ ಬಾಳೆ

-ಜಯಶಂಕರ್‌ ಬದನಗುಪ್ಪೆ

ಅತಿಯಾದ ಮಳೆಯಿಂದ ಸಾಕಷ್ಟು ಪ್ರಮಾಣ ಬೆಳೆ ನಷ್ಟವಾಗಿದೆ. ಹಲವಾರು ಕಡೆಗಳಲ್ಲಿ ಬಾಳೆ, ಶುಂಠಿ, ಹರಿಸಿಣ ಸೇರಿ ಹಲವಾರು ಬೆಳೆಗಳು ನಷ್ಟಕ್ಕೀಡಾಗಿವೆ. ಅದೇ ವೇಳೆಯಲ್ಲಿ ಇವುಗಳ ಬೆಲೆ ಹೆಚ್ಚಾಗಿ ರೈತನಿಗೆ ತುಸು ಲಾಭವಾಗಿದೆ. ಅದರಲ್ಲಿಯೂ ಏಲಕ್ಕಿ ಬಾಳೆಗೆ ಈ ಬಾರಿ ಹೆಚ್ಚಿನ ಬೆಲೆ ಸಿಕ್ಕಿದ್ದು, ರೈತನ ಕೈ ಹಿಡಿಯುವಲ್ಲಿ ಏಲಕ್ಕಿ ಯಶಸ್ವಿಯಾಗಿದೆ.

ಈ ವರ್ಷದ ಆರಂಭದಿಂದ ಹಿಡಿದು ಏಲಕ್ಕಿ ಬಾಳೆಗೆ ಸಾಧಾರಣ ಬೆಲೆ ಸಿಕ್ಕಿದೆ. ಒಂದು ಹಂತದಲ್ಲಿ ಕೆಜಿಗೆ ೭೫ ರೂ. ದಾಟಿದ್ದೂ ಇದೆ. ಪ್ರಸ್ತುತ ಮೈಸೂರು ಹಾಪ್‌ಕಾಮ್ಸ್‌ನಲ್ಲಿ ಕೆಜಿ ಏಲಕ್ಕಿ ಬಾಳೆಗೆ ೪೦ ರೂ. ಇದ್ದು, ರೈತರು ತುಸು ಆದಾಯ ಕಾಣುವಂತಾಗಿದೆ.

ಮೈಸೂರು, ಚಾಮರಾಜನಗರ, ಮಂಡ್ಯದ ಕೆಲ ಭಾಗಗಳಲ್ಲಿ ಏಲಕ್ಕಿ ಬಾಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ತಮಿಳುನಾಡಿನಲ್ಲಿ ಬೆಳೆಯುವ ಏಲಕ್ಕಿ ಬಾಳೆಗಿಂತ ಗಾತ್ರದಲ್ಲಿ ಸಣ್ಣದಿದ್ದರೂ ಹೆಚ್ಚು ರುಚಿ ಹೊಂದಿರುವ ಕಾರಣ ಈ ಭಾಗದ ಬಾಳೆಗೆ ಹೆಚ್ಚು ಬೇಡಿಕೆ ಇದೆ. ಈ ಬಾರಿ ತಗ್ಗು ಪ್ರದೇಶಗಳಲ್ಲಿ ಬೆಳೆದ ಬಾಳೆ ಹೆಚ್ಚಿನ ಮಳೆಯಿಂದ ಹಾನಿಗೀಡಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಬೆಳೆದಿರುವ ಬಾಳೆ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಏಲಕ್ಕಿ ದರ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ರೈತರಿಗೆ ಅನುಕೂಲ ಆಗಲಿದೆ.

೨೦೧೭-೧೮ ರಲ್ಲಿ ಕೆ.ಜಿ.ಏಲಕ್ಕಿ ಬಾಳೆಗೆ ೬೦ ರೂ. ದರ ಸಿಕ್ಕಿತ್ತು. ಈಗ ೪ ವರ್ಷದ ನಂತರ ನನಗೆ ೭೨ ರೂ. ಸಿಕ್ಕಿದೆ. ಇದು ಕೃಷಿಯಲ್ಲಿ ಆದ ನಷ್ಟ ಸರಿದೂಗಿಸಲು ನೆರವಾಗಿದೆ. ೨ ಎಕರೆಯಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದೆ. ಆರಂಭದಲ್ಲಿ ೭೨ ರೂ. ದರ ಸಿಕ್ಕಿದರೂ ತಿಂಗಳ ನಂತರ ಗುಣಮಟ್ಟ ಆಧರಿಸಿ ೫೫-೬೦ ರೂ. ಗೆ ಮಾರಾಟ ಮಾಡಿದ್ದೇವೆ. ಮೈಸೂರಿನ ಬೋಟಿ ಬಜಾರ್‌ನಲ್ಲಿ ಉತ್ತಮ ದರ ದೊರಕಿದೆ. ಈಗ ದರ ಕೆಜಿಗೆ ೪೦ ರೂ. ಇರುವುದರಿಂದ ಲಾಭದಾಯಕ ಎಂದು ಹೇಳಲಾಗದು. -ಬಿ.ಉದಯಕುಮಾರ್, ರೈತರು, ಹರವೆ ಗ್ರಾಮ, ಚಾ.ನಗರ ತಾಲ್ಲೂಕು.

೧೦ ಎಕರೆ ಪ್ರದೇಶದಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದೆ, ಅತಿಯಾದ ಮಳೆಯಿಂದಾಗಿ ಒಂದಷ್ಟು ಫಸಲು ನಷ್ಟವಾಗಿದೆ. ಉಳಿದ ಬಾಳೆ ಬೆಳೆಯನ್ನು ಕೆ.ಜಿ.ಗೆ ೬೬ ರೂ.ನಂತೆ ಮಾರಾಟ ಮಾಡಿದ್ದೇನೆ. ಪ್ರತಿ ಬಾರಿ ಹಾಪ್ ಕಾಮ್ಸ್ ಗೆ ಮಾರಾಟ ಮಾಡಲಾಗುತ್ತಿತ್ತು. ಈ ಬಾರಿ ರಿಲಾಯನ್ಸ್ ಮಾರಾಟ ಮಳಿಗೆಗೂ ಕೊಟ್ಟಿದ್ದೇನೆ. -ಶಿವನಂಜಪ್ಪ, ರೈತರು, ಚಿಕ್ಕಕಾನ್ಯ, ಮೈಸೂರು ತಾಲ್ಲೂಕು

ಹಾಪ್ ಕಾಮ್ಸ್ ವಾರ್ಷಿಕ ಸರಾಸರಿ ದರ

೨೦೧೮-೧೯ರಲ್ಲಿ ಕೆಜಿ.ಗೆ ೪೪ ರೂ.

೨೦೧೯-೨೦ರಲ್ಲಿ ೫೪ ರೂ.

೨೦೨೦-೨೧ ರಲ್ಲಿ ೫೧ ರೂ.

೨೦೨೧-೨೨ ರಲ್ಲಿ ೩೯ ರೂ.

andolana

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

7 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

50 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago