-ಜಯಶಂಕರ್ ಬದನಗುಪ್ಪೆ
ಅತಿಯಾದ ಮಳೆಯಿಂದ ಸಾಕಷ್ಟು ಪ್ರಮಾಣ ಬೆಳೆ ನಷ್ಟವಾಗಿದೆ. ಹಲವಾರು ಕಡೆಗಳಲ್ಲಿ ಬಾಳೆ, ಶುಂಠಿ, ಹರಿಸಿಣ ಸೇರಿ ಹಲವಾರು ಬೆಳೆಗಳು ನಷ್ಟಕ್ಕೀಡಾಗಿವೆ. ಅದೇ ವೇಳೆಯಲ್ಲಿ ಇವುಗಳ ಬೆಲೆ ಹೆಚ್ಚಾಗಿ ರೈತನಿಗೆ ತುಸು ಲಾಭವಾಗಿದೆ. ಅದರಲ್ಲಿಯೂ ಏಲಕ್ಕಿ ಬಾಳೆಗೆ ಈ ಬಾರಿ ಹೆಚ್ಚಿನ ಬೆಲೆ ಸಿಕ್ಕಿದ್ದು, ರೈತನ ಕೈ ಹಿಡಿಯುವಲ್ಲಿ ಏಲಕ್ಕಿ ಯಶಸ್ವಿಯಾಗಿದೆ.
ಈ ವರ್ಷದ ಆರಂಭದಿಂದ ಹಿಡಿದು ಏಲಕ್ಕಿ ಬಾಳೆಗೆ ಸಾಧಾರಣ ಬೆಲೆ ಸಿಕ್ಕಿದೆ. ಒಂದು ಹಂತದಲ್ಲಿ ಕೆಜಿಗೆ ೭೫ ರೂ. ದಾಟಿದ್ದೂ ಇದೆ. ಪ್ರಸ್ತುತ ಮೈಸೂರು ಹಾಪ್ಕಾಮ್ಸ್ನಲ್ಲಿ ಕೆಜಿ ಏಲಕ್ಕಿ ಬಾಳೆಗೆ ೪೦ ರೂ. ಇದ್ದು, ರೈತರು ತುಸು ಆದಾಯ ಕಾಣುವಂತಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯದ ಕೆಲ ಭಾಗಗಳಲ್ಲಿ ಏಲಕ್ಕಿ ಬಾಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ತಮಿಳುನಾಡಿನಲ್ಲಿ ಬೆಳೆಯುವ ಏಲಕ್ಕಿ ಬಾಳೆಗಿಂತ ಗಾತ್ರದಲ್ಲಿ ಸಣ್ಣದಿದ್ದರೂ ಹೆಚ್ಚು ರುಚಿ ಹೊಂದಿರುವ ಕಾರಣ ಈ ಭಾಗದ ಬಾಳೆಗೆ ಹೆಚ್ಚು ಬೇಡಿಕೆ ಇದೆ. ಈ ಬಾರಿ ತಗ್ಗು ಪ್ರದೇಶಗಳಲ್ಲಿ ಬೆಳೆದ ಬಾಳೆ ಹೆಚ್ಚಿನ ಮಳೆಯಿಂದ ಹಾನಿಗೀಡಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಬೆಳೆದಿರುವ ಬಾಳೆ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಏಲಕ್ಕಿ ದರ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ರೈತರಿಗೆ ಅನುಕೂಲ ಆಗಲಿದೆ.
೨೦೧೭-೧೮ ರಲ್ಲಿ ಕೆ.ಜಿ.ಏಲಕ್ಕಿ ಬಾಳೆಗೆ ೬೦ ರೂ. ದರ ಸಿಕ್ಕಿತ್ತು. ಈಗ ೪ ವರ್ಷದ ನಂತರ ನನಗೆ ೭೨ ರೂ. ಸಿಕ್ಕಿದೆ. ಇದು ಕೃಷಿಯಲ್ಲಿ ಆದ ನಷ್ಟ ಸರಿದೂಗಿಸಲು ನೆರವಾಗಿದೆ. ೨ ಎಕರೆಯಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದೆ. ಆರಂಭದಲ್ಲಿ ೭೨ ರೂ. ದರ ಸಿಕ್ಕಿದರೂ ತಿಂಗಳ ನಂತರ ಗುಣಮಟ್ಟ ಆಧರಿಸಿ ೫೫-೬೦ ರೂ. ಗೆ ಮಾರಾಟ ಮಾಡಿದ್ದೇವೆ. ಮೈಸೂರಿನ ಬೋಟಿ ಬಜಾರ್ನಲ್ಲಿ ಉತ್ತಮ ದರ ದೊರಕಿದೆ. ಈಗ ದರ ಕೆಜಿಗೆ ೪೦ ರೂ. ಇರುವುದರಿಂದ ಲಾಭದಾಯಕ ಎಂದು ಹೇಳಲಾಗದು. -ಬಿ.ಉದಯಕುಮಾರ್, ರೈತರು, ಹರವೆ ಗ್ರಾಮ, ಚಾ.ನಗರ ತಾಲ್ಲೂಕು.
೧೦ ಎಕರೆ ಪ್ರದೇಶದಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದೆ, ಅತಿಯಾದ ಮಳೆಯಿಂದಾಗಿ ಒಂದಷ್ಟು ಫಸಲು ನಷ್ಟವಾಗಿದೆ. ಉಳಿದ ಬಾಳೆ ಬೆಳೆಯನ್ನು ಕೆ.ಜಿ.ಗೆ ೬೬ ರೂ.ನಂತೆ ಮಾರಾಟ ಮಾಡಿದ್ದೇನೆ. ಪ್ರತಿ ಬಾರಿ ಹಾಪ್ ಕಾಮ್ಸ್ ಗೆ ಮಾರಾಟ ಮಾಡಲಾಗುತ್ತಿತ್ತು. ಈ ಬಾರಿ ರಿಲಾಯನ್ಸ್ ಮಾರಾಟ ಮಳಿಗೆಗೂ ಕೊಟ್ಟಿದ್ದೇನೆ. -ಶಿವನಂಜಪ್ಪ, ರೈತರು, ಚಿಕ್ಕಕಾನ್ಯ, ಮೈಸೂರು ತಾಲ್ಲೂಕು
ಹಾಪ್ ಕಾಮ್ಸ್ ವಾರ್ಷಿಕ ಸರಾಸರಿ ದರ
೨೦೧೮-೧೯ರಲ್ಲಿ ಕೆಜಿ.ಗೆ ೪೪ ರೂ.
೨೦೧೯-೨೦ರಲ್ಲಿ ೫೪ ರೂ.
೨೦೨೦-೨೧ ರಲ್ಲಿ ೫೧ ರೂ.
೨೦೨೧-೨೨ ರಲ್ಲಿ ೩೯ ರೂ.
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…