ಚಿತ್ರ ಮಂಜರಿ

ಅರವಿಂದ್‌ ಭೇಟಿಯಾಗಿ 1000 ದಿನ : ದಿವ್ಯ ಉರುಡುಗ ಸಂಭ್ರಮ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ ಪ್ರೇಮಾಂಕುರವಾಗಿತ್ತು ಆ ಪೈಕಿ ದಿವ್ಯಾ ಹಾಗೂ ಅರವಿಂದ್‌ ಜೋಡಿ ಬಹಳ ವಿಶೇಷವೆನಿಸುತ್ತದೆ.ಈ ಜೋಡಿ ಪರಸ್ಪರ ಭೇಟಿಯಾಗಿ ಇಂದಿಗೆ 1000 ದಿನ ಪೂರ್ಣಗೊಂಡಿದೆ. ಈ ಕುರಿತು ದಿವ್ಯಾ ಉರುಡುಗ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ನಾನು ನಿಮ್ಮೊಂದಿಗೆ 1000 ಸುವರ್ಣ ದಿನಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬಗ್ಗೆ ಯೋಚಿಸಿದಾಗಲೆಲ್ಲಾ ಪಡೆಯಲು ಎಷ್ಟೊಂದು ಅದೃಷ್ಟಶಾಲಿ ಎನ್ನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅರ್ಧಂಬರ್ಧ ಪ್ರೇಮ ಕಥೆ ಎಂಬ ಸಿನಿಮಾದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಕಾಣಲಿದೆ.ಇದು ಅರವಿಂದ್‌ ಅವರ ಮೊದಲನೇ ಸಿನಿಮಾ ಆಗಿದೆ. ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ ಎಸಿ ವಿಷುವಲ್ಸ್‌ ಸೇರಿ ಈ ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಿಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಮೇಲ್ನೋಟಕ್ಕೆ ಇದು ಲಗ್ನ ಪತ್ರಿಕೆ ಪೂಜೆ ಎಂಬಂತಿತ್ತು. ಅಭಿಮಾನಿಗಳೂ ಕೂಡ ಇದು ಮದುವೆಯ ಕರೆಯೋಲೆ ಎಂದೇ ಭಾವಿಸಿದ್ದರು. ಆದರೆ ಈ ಜೋಡಿ ಮದುವೆಯ ಕುರಿತಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತೆರೆ ಮೇಲಿನ ಪ್ರಣಯ ಪಕ್ಷಿಗಳಾಗಿರುವ ಈ ಜೋಡಿಗಳು ಯಾವಾಗ ಸಪ್ತಪದಿ ತುಳಿಯುತ್ತಾರೆ ಕಾದು ನೋಡಬೇಕಿದೆ.

lokesh

Recent Posts

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

6 mins ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

33 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

48 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

1 hour ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

2 hours ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago