ಚಿತ್ರ ಮಂಜರಿ

ಅರವಿಂದ್‌ ಭೇಟಿಯಾಗಿ 1000 ದಿನ : ದಿವ್ಯ ಉರುಡುಗ ಸಂಭ್ರಮ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ ಪ್ರೇಮಾಂಕುರವಾಗಿತ್ತು ಆ ಪೈಕಿ ದಿವ್ಯಾ ಹಾಗೂ ಅರವಿಂದ್‌ ಜೋಡಿ ಬಹಳ ವಿಶೇಷವೆನಿಸುತ್ತದೆ.ಈ ಜೋಡಿ ಪರಸ್ಪರ ಭೇಟಿಯಾಗಿ ಇಂದಿಗೆ 1000 ದಿನ ಪೂರ್ಣಗೊಂಡಿದೆ. ಈ ಕುರಿತು ದಿವ್ಯಾ ಉರುಡುಗ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ನಾನು ನಿಮ್ಮೊಂದಿಗೆ 1000 ಸುವರ್ಣ ದಿನಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬಗ್ಗೆ ಯೋಚಿಸಿದಾಗಲೆಲ್ಲಾ ಪಡೆಯಲು ಎಷ್ಟೊಂದು ಅದೃಷ್ಟಶಾಲಿ ಎನ್ನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅರ್ಧಂಬರ್ಧ ಪ್ರೇಮ ಕಥೆ ಎಂಬ ಸಿನಿಮಾದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಕಾಣಲಿದೆ.ಇದು ಅರವಿಂದ್‌ ಅವರ ಮೊದಲನೇ ಸಿನಿಮಾ ಆಗಿದೆ. ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ ಎಸಿ ವಿಷುವಲ್ಸ್‌ ಸೇರಿ ಈ ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಿಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಮೇಲ್ನೋಟಕ್ಕೆ ಇದು ಲಗ್ನ ಪತ್ರಿಕೆ ಪೂಜೆ ಎಂಬಂತಿತ್ತು. ಅಭಿಮಾನಿಗಳೂ ಕೂಡ ಇದು ಮದುವೆಯ ಕರೆಯೋಲೆ ಎಂದೇ ಭಾವಿಸಿದ್ದರು. ಆದರೆ ಈ ಜೋಡಿ ಮದುವೆಯ ಕುರಿತಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತೆರೆ ಮೇಲಿನ ಪ್ರಣಯ ಪಕ್ಷಿಗಳಾಗಿರುವ ಈ ಜೋಡಿಗಳು ಯಾವಾಗ ಸಪ್ತಪದಿ ತುಳಿಯುತ್ತಾರೆ ಕಾದು ನೋಡಬೇಕಿದೆ.

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

15 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago