ಚಿತ್ರ ಮಂಜರಿ

ಅರವಿಂದ್‌ ಭೇಟಿಯಾಗಿ 1000 ದಿನ : ದಿವ್ಯ ಉರುಡುಗ ಸಂಭ್ರಮ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ ಪ್ರೇಮಾಂಕುರವಾಗಿತ್ತು ಆ ಪೈಕಿ ದಿವ್ಯಾ ಹಾಗೂ ಅರವಿಂದ್‌ ಜೋಡಿ ಬಹಳ ವಿಶೇಷವೆನಿಸುತ್ತದೆ.ಈ ಜೋಡಿ ಪರಸ್ಪರ ಭೇಟಿಯಾಗಿ ಇಂದಿಗೆ 1000 ದಿನ ಪೂರ್ಣಗೊಂಡಿದೆ. ಈ ಕುರಿತು ದಿವ್ಯಾ ಉರುಡುಗ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ನಾನು ನಿಮ್ಮೊಂದಿಗೆ 1000 ಸುವರ್ಣ ದಿನಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬಗ್ಗೆ ಯೋಚಿಸಿದಾಗಲೆಲ್ಲಾ ಪಡೆಯಲು ಎಷ್ಟೊಂದು ಅದೃಷ್ಟಶಾಲಿ ಎನ್ನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅರ್ಧಂಬರ್ಧ ಪ್ರೇಮ ಕಥೆ ಎಂಬ ಸಿನಿಮಾದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಕಾಣಲಿದೆ.ಇದು ಅರವಿಂದ್‌ ಅವರ ಮೊದಲನೇ ಸಿನಿಮಾ ಆಗಿದೆ. ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ ಎಸಿ ವಿಷುವಲ್ಸ್‌ ಸೇರಿ ಈ ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಿಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಮೇಲ್ನೋಟಕ್ಕೆ ಇದು ಲಗ್ನ ಪತ್ರಿಕೆ ಪೂಜೆ ಎಂಬಂತಿತ್ತು. ಅಭಿಮಾನಿಗಳೂ ಕೂಡ ಇದು ಮದುವೆಯ ಕರೆಯೋಲೆ ಎಂದೇ ಭಾವಿಸಿದ್ದರು. ಆದರೆ ಈ ಜೋಡಿ ಮದುವೆಯ ಕುರಿತಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತೆರೆ ಮೇಲಿನ ಪ್ರಣಯ ಪಕ್ಷಿಗಳಾಗಿರುವ ಈ ಜೋಡಿಗಳು ಯಾವಾಗ ಸಪ್ತಪದಿ ತುಳಿಯುತ್ತಾರೆ ಕಾದು ನೋಡಬೇಕಿದೆ.

lokesh

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

1 hour ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

5 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

6 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

6 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

7 hours ago