ಚಿತ್ರ ಮಂಜರಿ

ಅರವಿಂದ್‌ ಭೇಟಿಯಾಗಿ 1000 ದಿನ : ದಿವ್ಯ ಉರುಡುಗ ಸಂಭ್ರಮ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ ಪ್ರೇಮಾಂಕುರವಾಗಿತ್ತು ಆ ಪೈಕಿ ದಿವ್ಯಾ ಹಾಗೂ ಅರವಿಂದ್‌ ಜೋಡಿ ಬಹಳ ವಿಶೇಷವೆನಿಸುತ್ತದೆ.ಈ ಜೋಡಿ ಪರಸ್ಪರ ಭೇಟಿಯಾಗಿ ಇಂದಿಗೆ 1000 ದಿನ ಪೂರ್ಣಗೊಂಡಿದೆ. ಈ ಕುರಿತು ದಿವ್ಯಾ ಉರುಡುಗ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ನಾನು ನಿಮ್ಮೊಂದಿಗೆ 1000 ಸುವರ್ಣ ದಿನಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬಗ್ಗೆ ಯೋಚಿಸಿದಾಗಲೆಲ್ಲಾ ಪಡೆಯಲು ಎಷ್ಟೊಂದು ಅದೃಷ್ಟಶಾಲಿ ಎನ್ನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅರ್ಧಂಬರ್ಧ ಪ್ರೇಮ ಕಥೆ ಎಂಬ ಸಿನಿಮಾದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಕಾಣಲಿದೆ.ಇದು ಅರವಿಂದ್‌ ಅವರ ಮೊದಲನೇ ಸಿನಿಮಾ ಆಗಿದೆ. ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ ಎಸಿ ವಿಷುವಲ್ಸ್‌ ಸೇರಿ ಈ ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಿಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಮೇಲ್ನೋಟಕ್ಕೆ ಇದು ಲಗ್ನ ಪತ್ರಿಕೆ ಪೂಜೆ ಎಂಬಂತಿತ್ತು. ಅಭಿಮಾನಿಗಳೂ ಕೂಡ ಇದು ಮದುವೆಯ ಕರೆಯೋಲೆ ಎಂದೇ ಭಾವಿಸಿದ್ದರು. ಆದರೆ ಈ ಜೋಡಿ ಮದುವೆಯ ಕುರಿತಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತೆರೆ ಮೇಲಿನ ಪ್ರಣಯ ಪಕ್ಷಿಗಳಾಗಿರುವ ಈ ಜೋಡಿಗಳು ಯಾವಾಗ ಸಪ್ತಪದಿ ತುಳಿಯುತ್ತಾರೆ ಕಾದು ನೋಡಬೇಕಿದೆ.

lokesh

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago