ಚಿತ್ರ ಮಂಜರಿ

ಅರವಿಂದ್‌ ಭೇಟಿಯಾಗಿ 1000 ದಿನ : ದಿವ್ಯ ಉರುಡುಗ ಸಂಭ್ರಮ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ ಪ್ರೇಮಾಂಕುರವಾಗಿತ್ತು ಆ ಪೈಕಿ ದಿವ್ಯಾ ಹಾಗೂ ಅರವಿಂದ್‌ ಜೋಡಿ ಬಹಳ ವಿಶೇಷವೆನಿಸುತ್ತದೆ.ಈ ಜೋಡಿ ಪರಸ್ಪರ ಭೇಟಿಯಾಗಿ ಇಂದಿಗೆ 1000 ದಿನ ಪೂರ್ಣಗೊಂಡಿದೆ. ಈ ಕುರಿತು ದಿವ್ಯಾ ಉರುಡುಗ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ನಾನು ನಿಮ್ಮೊಂದಿಗೆ 1000 ಸುವರ್ಣ ದಿನಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬಗ್ಗೆ ಯೋಚಿಸಿದಾಗಲೆಲ್ಲಾ ಪಡೆಯಲು ಎಷ್ಟೊಂದು ಅದೃಷ್ಟಶಾಲಿ ಎನ್ನಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅರ್ಧಂಬರ್ಧ ಪ್ರೇಮ ಕಥೆ ಎಂಬ ಸಿನಿಮಾದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಕಾಣಲಿದೆ.ಇದು ಅರವಿಂದ್‌ ಅವರ ಮೊದಲನೇ ಸಿನಿಮಾ ಆಗಿದೆ. ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ ಎಸಿ ವಿಷುವಲ್ಸ್‌ ಸೇರಿ ಈ ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಇಬ್ಬರೂ ಕೂಡ ಒಟ್ಟಿಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಮೇಲ್ನೋಟಕ್ಕೆ ಇದು ಲಗ್ನ ಪತ್ರಿಕೆ ಪೂಜೆ ಎಂಬಂತಿತ್ತು. ಅಭಿಮಾನಿಗಳೂ ಕೂಡ ಇದು ಮದುವೆಯ ಕರೆಯೋಲೆ ಎಂದೇ ಭಾವಿಸಿದ್ದರು. ಆದರೆ ಈ ಜೋಡಿ ಮದುವೆಯ ಕುರಿತಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ತೆರೆ ಮೇಲಿನ ಪ್ರಣಯ ಪಕ್ಷಿಗಳಾಗಿರುವ ಈ ಜೋಡಿಗಳು ಯಾವಾಗ ಸಪ್ತಪದಿ ತುಳಿಯುತ್ತಾರೆ ಕಾದು ನೋಡಬೇಕಿದೆ.

lokesh

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

10 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

15 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

16 hours ago