ಚಿತ್ರ ಮಂಜರಿ

ಸಹ ಸವಾರನಿಗೆ 12 ಲಕ್ಷ ರೂ. ಮೌಲ್ಯದ ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಜಿತ್ ತನ್ನ ಸಹ ಸವಾರ ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದು, ಇಬ್ಬರೂ 2022 ರಲ್ಲಿ ಸಿಕ್ಕಿಂಗೆ ಬೈಕ್ ಪ್ರವಾಸ ಕೈಗೊಂಡಿದ್ದರು. ನಂತರ ಹಲವು ಬಾರಿ ಜೊತೆಯಾಗಿ ಬೈಕ್ ಪ್ರವಾಸ ಕೈಗೊಂಡಿದ್ದರು. ಸತ್ಪತಿ ಅವರು ಅಜಿತ್ ಅವರಿಗಾಗಿ ಎರಡು ಬಾರಿ ಬೈಕ್ ಪ್ರವಾಸವನ್ನು ಆಯೋಜಿಸಿದ್ದರು.

ಇತ್ತೀಚೆಗಷ್ಟೇ ನೇಪಾಳ ಪ್ರವಾಸ ಆಯೋಜಿಸಿದ್ದ ಸತ್ಪತಿ ಅವರಿಗೆ ನಟ ಅಜಿತ್ ಅವರು ಬಿಎಂಡಬ್ಲ್ಯು ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

Bikedekho.com ಪ್ರಕಾರ, ಸೂಪರ್ ಬೈಕ್‌ನ ಆನ್ ರೋಡ್ ಬೆಲೆ ರೂ. 12.95 ಲಕ್ಷ. ರೂಪಾಯಿ.

ನಟ ಅಜಿತ್ ಅವರ ಸರ್ಪ್ರೈಸ್ ಗಿಫ್ಟ್ ಗೆ ಪ್ರತಿಕ್ರಿಯಿಸಿರುವ ಸತ್ಪತಿ ಅವರು, “ಯಾವುದೂ ಪೂರ್ವನಿರ್ಧರಿತವಾಗಿರುವುದಿಲ್ಲ. ನಮ್ಮ ಹಿಂದಿನ ಅಡೆತಡೆಗಳು ಹೊಸ ಆರಂಭಕ್ಕೆ ಕಾರಣವಾಬಹುದು” ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಸೂಪರ್ ಬೈಕ್ ಜಗತ್ತನ್ನು ಅನ್ವೇಷಿಸಲು ನನಗೆ ನೆರವಾಗಲಿದೆ. ಇದು ಪ್ರೀತಿಯ ಅಣ್ಣನಿಂದ(ಅಜಿತ್ ಕುಮಾರ್) ಸಿಕ್ಕ ಉಡುಗೊರೆ. ಏನನ್ನೂ ಅಪೇಕ್ಷಿಸದ ಹಾಗೂ ಒಳ್ಳೆದನ್ನೇ ಬಯಸುವ ಗುಣ ಅವರದ್ದು. ಅಂತಹ ದೊಡ್ಡ ಸ್ಟಾರ್ ನಟನೊಂದಿಗೆ ಸಂಪರ್ಕ ಹೊಂದಿರುವುದು ನನ್ನ ಅದೃಷ್ಟ ಎಂದು ಸತ್ಪತಿ ಹೇಳಿದ್ದಾರೆ.

“ಅವರು ನನಗೆ ಹೆಚ್ಚು ಒಳ್ಳೆಯದನ್ನು ಬಯಸುವ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದ ಹಿರಿಯ ಸಹೋದರನಂತೆ ಭಾವಿಸಿದರು. ನೀವು ಗ್ರೇಟ್, ಅಣ್ಣಾ” ಎಂದು ಬರೆದುಕೊಂಡಿದ್ದಾರೆ.

 

andolanait

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

3 hours ago