ಚಿತ್ರ ಮಂಜರಿ

ಸಹ ಸವಾರನಿಗೆ 12 ಲಕ್ಷ ರೂ. ಮೌಲ್ಯದ ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಜಿತ್ ತನ್ನ ಸಹ ಸವಾರ ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದು, ಇಬ್ಬರೂ 2022 ರಲ್ಲಿ ಸಿಕ್ಕಿಂಗೆ ಬೈಕ್ ಪ್ರವಾಸ ಕೈಗೊಂಡಿದ್ದರು. ನಂತರ ಹಲವು ಬಾರಿ ಜೊತೆಯಾಗಿ ಬೈಕ್ ಪ್ರವಾಸ ಕೈಗೊಂಡಿದ್ದರು. ಸತ್ಪತಿ ಅವರು ಅಜಿತ್ ಅವರಿಗಾಗಿ ಎರಡು ಬಾರಿ ಬೈಕ್ ಪ್ರವಾಸವನ್ನು ಆಯೋಜಿಸಿದ್ದರು.

ಇತ್ತೀಚೆಗಷ್ಟೇ ನೇಪಾಳ ಪ್ರವಾಸ ಆಯೋಜಿಸಿದ್ದ ಸತ್ಪತಿ ಅವರಿಗೆ ನಟ ಅಜಿತ್ ಅವರು ಬಿಎಂಡಬ್ಲ್ಯು ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

Bikedekho.com ಪ್ರಕಾರ, ಸೂಪರ್ ಬೈಕ್‌ನ ಆನ್ ರೋಡ್ ಬೆಲೆ ರೂ. 12.95 ಲಕ್ಷ. ರೂಪಾಯಿ.

ನಟ ಅಜಿತ್ ಅವರ ಸರ್ಪ್ರೈಸ್ ಗಿಫ್ಟ್ ಗೆ ಪ್ರತಿಕ್ರಿಯಿಸಿರುವ ಸತ್ಪತಿ ಅವರು, “ಯಾವುದೂ ಪೂರ್ವನಿರ್ಧರಿತವಾಗಿರುವುದಿಲ್ಲ. ನಮ್ಮ ಹಿಂದಿನ ಅಡೆತಡೆಗಳು ಹೊಸ ಆರಂಭಕ್ಕೆ ಕಾರಣವಾಬಹುದು” ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಸೂಪರ್ ಬೈಕ್ ಜಗತ್ತನ್ನು ಅನ್ವೇಷಿಸಲು ನನಗೆ ನೆರವಾಗಲಿದೆ. ಇದು ಪ್ರೀತಿಯ ಅಣ್ಣನಿಂದ(ಅಜಿತ್ ಕುಮಾರ್) ಸಿಕ್ಕ ಉಡುಗೊರೆ. ಏನನ್ನೂ ಅಪೇಕ್ಷಿಸದ ಹಾಗೂ ಒಳ್ಳೆದನ್ನೇ ಬಯಸುವ ಗುಣ ಅವರದ್ದು. ಅಂತಹ ದೊಡ್ಡ ಸ್ಟಾರ್ ನಟನೊಂದಿಗೆ ಸಂಪರ್ಕ ಹೊಂದಿರುವುದು ನನ್ನ ಅದೃಷ್ಟ ಎಂದು ಸತ್ಪತಿ ಹೇಳಿದ್ದಾರೆ.

“ಅವರು ನನಗೆ ಹೆಚ್ಚು ಒಳ್ಳೆಯದನ್ನು ಬಯಸುವ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದ ಹಿರಿಯ ಸಹೋದರನಂತೆ ಭಾವಿಸಿದರು. ನೀವು ಗ್ರೇಟ್, ಅಣ್ಣಾ” ಎಂದು ಬರೆದುಕೊಂಡಿದ್ದಾರೆ.

 

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

4 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

4 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

5 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

7 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

8 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

10 hours ago