ಚಿತ್ರ ಮಂಜರಿ

ಸಹ ಸವಾರನಿಗೆ 12 ಲಕ್ಷ ರೂ. ಮೌಲ್ಯದ ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಜಿತ್ ತನ್ನ ಸಹ ಸವಾರ ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದು, ಇಬ್ಬರೂ 2022 ರಲ್ಲಿ ಸಿಕ್ಕಿಂಗೆ ಬೈಕ್ ಪ್ರವಾಸ ಕೈಗೊಂಡಿದ್ದರು. ನಂತರ ಹಲವು ಬಾರಿ ಜೊತೆಯಾಗಿ ಬೈಕ್ ಪ್ರವಾಸ ಕೈಗೊಂಡಿದ್ದರು. ಸತ್ಪತಿ ಅವರು ಅಜಿತ್ ಅವರಿಗಾಗಿ ಎರಡು ಬಾರಿ ಬೈಕ್ ಪ್ರವಾಸವನ್ನು ಆಯೋಜಿಸಿದ್ದರು.

ಇತ್ತೀಚೆಗಷ್ಟೇ ನೇಪಾಳ ಪ್ರವಾಸ ಆಯೋಜಿಸಿದ್ದ ಸತ್ಪತಿ ಅವರಿಗೆ ನಟ ಅಜಿತ್ ಅವರು ಬಿಎಂಡಬ್ಲ್ಯು ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

Bikedekho.com ಪ್ರಕಾರ, ಸೂಪರ್ ಬೈಕ್‌ನ ಆನ್ ರೋಡ್ ಬೆಲೆ ರೂ. 12.95 ಲಕ್ಷ. ರೂಪಾಯಿ.

ನಟ ಅಜಿತ್ ಅವರ ಸರ್ಪ್ರೈಸ್ ಗಿಫ್ಟ್ ಗೆ ಪ್ರತಿಕ್ರಿಯಿಸಿರುವ ಸತ್ಪತಿ ಅವರು, “ಯಾವುದೂ ಪೂರ್ವನಿರ್ಧರಿತವಾಗಿರುವುದಿಲ್ಲ. ನಮ್ಮ ಹಿಂದಿನ ಅಡೆತಡೆಗಳು ಹೊಸ ಆರಂಭಕ್ಕೆ ಕಾರಣವಾಬಹುದು” ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಸೂಪರ್ ಬೈಕ್ ಜಗತ್ತನ್ನು ಅನ್ವೇಷಿಸಲು ನನಗೆ ನೆರವಾಗಲಿದೆ. ಇದು ಪ್ರೀತಿಯ ಅಣ್ಣನಿಂದ(ಅಜಿತ್ ಕುಮಾರ್) ಸಿಕ್ಕ ಉಡುಗೊರೆ. ಏನನ್ನೂ ಅಪೇಕ್ಷಿಸದ ಹಾಗೂ ಒಳ್ಳೆದನ್ನೇ ಬಯಸುವ ಗುಣ ಅವರದ್ದು. ಅಂತಹ ದೊಡ್ಡ ಸ್ಟಾರ್ ನಟನೊಂದಿಗೆ ಸಂಪರ್ಕ ಹೊಂದಿರುವುದು ನನ್ನ ಅದೃಷ್ಟ ಎಂದು ಸತ್ಪತಿ ಹೇಳಿದ್ದಾರೆ.

“ಅವರು ನನಗೆ ಹೆಚ್ಚು ಒಳ್ಳೆಯದನ್ನು ಬಯಸುವ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದ ಹಿರಿಯ ಸಹೋದರನಂತೆ ಭಾವಿಸಿದರು. ನೀವು ಗ್ರೇಟ್, ಅಣ್ಣಾ” ಎಂದು ಬರೆದುಕೊಂಡಿದ್ದಾರೆ.

 

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

3 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

3 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

13 hours ago