ಚಿತ್ರ ಮಂಜರಿ

ಸಹ ಸವಾರನಿಗೆ 12 ಲಕ್ಷ ರೂ. ಮೌಲ್ಯದ ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಜಿತ್ ತನ್ನ ಸಹ ಸವಾರ ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದು, ಇಬ್ಬರೂ 2022 ರಲ್ಲಿ ಸಿಕ್ಕಿಂಗೆ ಬೈಕ್ ಪ್ರವಾಸ ಕೈಗೊಂಡಿದ್ದರು. ನಂತರ ಹಲವು ಬಾರಿ ಜೊತೆಯಾಗಿ ಬೈಕ್ ಪ್ರವಾಸ ಕೈಗೊಂಡಿದ್ದರು. ಸತ್ಪತಿ ಅವರು ಅಜಿತ್ ಅವರಿಗಾಗಿ ಎರಡು ಬಾರಿ ಬೈಕ್ ಪ್ರವಾಸವನ್ನು ಆಯೋಜಿಸಿದ್ದರು.

ಇತ್ತೀಚೆಗಷ್ಟೇ ನೇಪಾಳ ಪ್ರವಾಸ ಆಯೋಜಿಸಿದ್ದ ಸತ್ಪತಿ ಅವರಿಗೆ ನಟ ಅಜಿತ್ ಅವರು ಬಿಎಂಡಬ್ಲ್ಯು ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

Bikedekho.com ಪ್ರಕಾರ, ಸೂಪರ್ ಬೈಕ್‌ನ ಆನ್ ರೋಡ್ ಬೆಲೆ ರೂ. 12.95 ಲಕ್ಷ. ರೂಪಾಯಿ.

ನಟ ಅಜಿತ್ ಅವರ ಸರ್ಪ್ರೈಸ್ ಗಿಫ್ಟ್ ಗೆ ಪ್ರತಿಕ್ರಿಯಿಸಿರುವ ಸತ್ಪತಿ ಅವರು, “ಯಾವುದೂ ಪೂರ್ವನಿರ್ಧರಿತವಾಗಿರುವುದಿಲ್ಲ. ನಮ್ಮ ಹಿಂದಿನ ಅಡೆತಡೆಗಳು ಹೊಸ ಆರಂಭಕ್ಕೆ ಕಾರಣವಾಬಹುದು” ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಸೂಪರ್ ಬೈಕ್ ಜಗತ್ತನ್ನು ಅನ್ವೇಷಿಸಲು ನನಗೆ ನೆರವಾಗಲಿದೆ. ಇದು ಪ್ರೀತಿಯ ಅಣ್ಣನಿಂದ(ಅಜಿತ್ ಕುಮಾರ್) ಸಿಕ್ಕ ಉಡುಗೊರೆ. ಏನನ್ನೂ ಅಪೇಕ್ಷಿಸದ ಹಾಗೂ ಒಳ್ಳೆದನ್ನೇ ಬಯಸುವ ಗುಣ ಅವರದ್ದು. ಅಂತಹ ದೊಡ್ಡ ಸ್ಟಾರ್ ನಟನೊಂದಿಗೆ ಸಂಪರ್ಕ ಹೊಂದಿರುವುದು ನನ್ನ ಅದೃಷ್ಟ ಎಂದು ಸತ್ಪತಿ ಹೇಳಿದ್ದಾರೆ.

“ಅವರು ನನಗೆ ಹೆಚ್ಚು ಒಳ್ಳೆಯದನ್ನು ಬಯಸುವ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದ ಹಿರಿಯ ಸಹೋದರನಂತೆ ಭಾವಿಸಿದರು. ನೀವು ಗ್ರೇಟ್, ಅಣ್ಣಾ” ಎಂದು ಬರೆದುಕೊಂಡಿದ್ದಾರೆ.

 

andolanait

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago