ಚಿತ್ರ ಮಂಜರಿ

ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.

ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು.
ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

6 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

7 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

8 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

9 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago