ಚಿತ್ರ ಮಂಜರಿ

ಒಂದೇ ದಿನ 15 ಕೋಟಿ ರೂ. ಗಳಿಕೆ ಮಾಡಿ ದಾಖಲೆ ನಿರ್ಮಿಸಿದ ‘ಕಾಂತಾರ’

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.

ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು.
ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

andolana

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

6 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

7 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

8 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

9 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

10 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

11 hours ago