೧೯೯೦ರ ಕಾಲಘಟ್ಟದ ಪ್ರೇಮಕಥೆ ಎನ್ನಲಾಗಿರುವ ೧೯೯೦’o ಚಿತ್ರಕ್ಕೆ ಕೊನೆಗೂ ಬಿಡುಗಡೆ ದಿನಾಂಕ ಗೊತ್ತಾಗಿದೆ. ಫೆಬ್ರವರಿ ೨೮ರಂದು ರಾಜ್ಯಾದ್ಯಂತ ಶಿವರಾತ್ರಿ ಪ್ರಯುಕ್ತ ಇದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ೧೯೯೦’o ಚಿತ್ರದ ಟ್ರೇಲರನ್ನು ‘ಥಟ್ ಅಂತ ಹೇಳಿ’ ಕಾರ್ಯಕ್ರಮ ಖ್ಯಾತಿಯ ಡಾ.ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
ಅರುಣ್-ರಾಣಿ ವರದ್ ನಾಯಕ-ನಾಯಕಿಯಾಗಿ ನಟಿಸಿರುವ ೧೯೯೦’o ಚಿತ್ರದ ಟ್ರೇಲರ್ ವೀಕ್ಷಿಸಿ ಮಾತನಾಡಿದ ನಾ.ಸೋಮೇಶ್ವರ, ತಮ್ಮದೇ ಅದ ಶುದ್ಧ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು. ಇನ್ನು, ಇಂದ್ರಜಿತ್ ಲಂಕೇಶ್ ಮಾತನಾಡಿ, ‘ಟ್ರೇಲರ್ ಚೆನ್ನಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ಸಿ.ಎಂ.ನಂದಕುಮಾರ್ ಮಾತನಾಡಿ, ‘ಚಿತ್ರದ ಹೆಸರೇ ಹೇಳುವಂತೆ ನಮ್ಮ ಚಿತ್ರದ ಕಥೆ ೯೦ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಅರುಣ್, ರಾಣಿ ವರದ್ ಜೊತೆಗೆ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಮುಂತಾದ ಚಿತ್ರ ತಂಡದ ಸದಸ್ಯರು ಹಾಜರಿದ್ದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…