ಚಿತ್ರ ಮಂಜರಿ

‘೧೯೯೦’S ಟ್ರೇಲರ್ ನಾ.ಸೋಮೇಶ್ವರರಿಂದ ಬಿಡುಗಡೆ

೧೯೯೦ರ ಕಾಲಘಟ್ಟದ ಪ್ರೇಮಕಥೆ ಎನ್ನಲಾಗಿರುವ ೧೯೯೦’o ಚಿತ್ರಕ್ಕೆ ಕೊನೆಗೂ ಬಿಡುಗಡೆ ದಿನಾಂಕ ಗೊತ್ತಾಗಿದೆ. ಫೆಬ್ರವರಿ ೨೮ರಂದು ರಾಜ್ಯಾದ್ಯಂತ ಶಿವರಾತ್ರಿ ಪ್ರಯುಕ್ತ ಇದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ೧೯೯೦’o ಚಿತ್ರದ ಟ್ರೇಲರನ್ನು ‘ಥಟ್ ಅಂತ ಹೇಳಿ’ ಕಾರ್ಯಕ್ರಮ ಖ್ಯಾತಿಯ ಡಾ.ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಅರುಣ್-ರಾಣಿ ವರದ್ ನಾಯಕ-ನಾಯಕಿಯಾಗಿ ನಟಿಸಿರುವ ೧೯೯೦’o ಚಿತ್ರದ ಟ್ರೇಲರ್ ವೀಕ್ಷಿಸಿ ಮಾತನಾಡಿದ ನಾ.ಸೋಮೇಶ್ವರ, ತಮ್ಮದೇ ಅದ ಶುದ್ಧ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು. ಇನ್ನು, ಇಂದ್ರಜಿತ್ ಲಂಕೇಶ್ ಮಾತನಾಡಿ, ‘ಟ್ರೇಲರ್ ಚೆನ್ನಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ಸಿ.ಎಂ.ನಂದಕುಮಾರ್ ಮಾತನಾಡಿ, ‘ಚಿತ್ರದ ಹೆಸರೇ ಹೇಳುವಂತೆ ನಮ್ಮ ಚಿತ್ರದ ಕಥೆ ೯೦ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ಅರುಣ್, ರಾಣಿ ವರದ್ ಜೊತೆಗೆ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಮುಂತಾದ ಚಿತ್ರ ತಂಡದ ಸದಸ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago