ಚಿತ್ರ ಮಂಜರಿ

‘೧೯೯೦’S ಟ್ರೇಲರ್ ನಾ.ಸೋಮೇಶ್ವರರಿಂದ ಬಿಡುಗಡೆ

೧೯೯೦ರ ಕಾಲಘಟ್ಟದ ಪ್ರೇಮಕಥೆ ಎನ್ನಲಾಗಿರುವ ೧೯೯೦’o ಚಿತ್ರಕ್ಕೆ ಕೊನೆಗೂ ಬಿಡುಗಡೆ ದಿನಾಂಕ ಗೊತ್ತಾಗಿದೆ. ಫೆಬ್ರವರಿ ೨೮ರಂದು ರಾಜ್ಯಾದ್ಯಂತ ಶಿವರಾತ್ರಿ ಪ್ರಯುಕ್ತ ಇದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ೧೯೯೦’o ಚಿತ್ರದ ಟ್ರೇಲರನ್ನು ‘ಥಟ್ ಅಂತ ಹೇಳಿ’ ಕಾರ್ಯಕ್ರಮ ಖ್ಯಾತಿಯ ಡಾ.ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಅರುಣ್-ರಾಣಿ ವರದ್ ನಾಯಕ-ನಾಯಕಿಯಾಗಿ ನಟಿಸಿರುವ ೧೯೯೦’o ಚಿತ್ರದ ಟ್ರೇಲರ್ ವೀಕ್ಷಿಸಿ ಮಾತನಾಡಿದ ನಾ.ಸೋಮೇಶ್ವರ, ತಮ್ಮದೇ ಅದ ಶುದ್ಧ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು. ಇನ್ನು, ಇಂದ್ರಜಿತ್ ಲಂಕೇಶ್ ಮಾತನಾಡಿ, ‘ಟ್ರೇಲರ್ ಚೆನ್ನಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ಸಿ.ಎಂ.ನಂದಕುಮಾರ್ ಮಾತನಾಡಿ, ‘ಚಿತ್ರದ ಹೆಸರೇ ಹೇಳುವಂತೆ ನಮ್ಮ ಚಿತ್ರದ ಕಥೆ ೯೦ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ಅರುಣ್, ರಾಣಿ ವರದ್ ಜೊತೆಗೆ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಮುಂತಾದ ಚಿತ್ರ ತಂಡದ ಸದಸ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

41 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago