ಚಿತ್ರ ಮಂಜರಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ತಮಿಳು ನಟ ಸೂರ್ಯ ಹಾಗೂ ಅಜಯ್ ದೇವಗನ್ ಮುಡಿಗೆ

ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ (ಸೆಪ್ಟಂಬರ್ 30) ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಿತು. ಈ ಬಾರಿ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಯನ್ನು ತಮಿಳು ನಟ ಸೂರ್ಯ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ಹಂಚಿಕೊಂಡಿದ್ದಾರೆ. ಇಬ್ಬರಿಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸೂರರೈ ಪೊಟ್ರು ಸಿನಿಮಾದ ಉತ್ತಮ ಅಭಿನಯಕ್ಕೆ ನಟ ಸೂರ್ಯ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಇನ್ನು ನಜ ಅಜಯ್ ದೇವಗನ್ ತಾನ್ಹಾಜಿ ಸಿನಿಮಾದ ಉತ್ತಮ ಅಭಿನಯಕ್ಕೆ ಪ್ರಶಸ್ತಿ ಗೆದ್ದು ಬೀಗಿದರು. ಅತ್ತ್ಯುತ್ತಮ ನಟಿ ಪ್ರಶಸ್ತಿ ಸೂರರೈ ಪೊಟ್ರು ಸಿನಿಮಾದ ನಟಿ ಅಪರ್ಣಾ ಬಲಾಮುರಳಿ ಪಾಲಾಗಿದೆ.

ಸೂರ್ಯ ನಟನೆಯ ಸೂರರೈ ಪೊಟ್ರು ಚಿತ್ರ ಅನೇಕ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದು ಬೀಗಿದೆ.  ಸೂರರೈ ಪೊಟ್ರು ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ಹಿನ್ನೆಲೆ ಸಂಗೀತ ಮತ್ತು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ನಟ ಸೂರ್ಯ ರಾಷ್ಟ್ರ ಮತ್ತು ನಟಿ, ನಿರ್ಮಾಪಕಿ ಜ್ಯೂತಿಕ ಇಬ್ಬರು ತಮ್ಮ ಮಕ್ಕಳು ಹಾಗು ತಮ್ಮ ಕುಟುಂಬದ ಜೊತೆ ರಾಷ್ಟ್ರಪ್ರಶಸ್ತಿ ಹಿಡಿದು ಸಂಭ್ರಮಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟ ಸೂರ್ಯ ಫೋಟೋ ಶೇರ್ ಮಾಡಿ ಎಲ್ಲಾ ವಿನ್ನರ್ಸ್‌ಗೂ ಅಭಿನಂದನೆ ಸಲ್ಲಿಸಿದರು. ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಸೂರ್ಯ ಈ ಪ್ರಶಸ್ತಿ ನಿಮಗೆ ಎಂದು ಹೇಳಿದರು.

andolana

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

10 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

13 hours ago