ಚಿತ್ರ ಮಂಜರಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ತಮಿಳು ನಟ ಸೂರ್ಯ ಹಾಗೂ ಅಜಯ್ ದೇವಗನ್ ಮುಡಿಗೆ

ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ (ಸೆಪ್ಟಂಬರ್ 30) ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಿತು. ಈ ಬಾರಿ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಯನ್ನು ತಮಿಳು ನಟ ಸೂರ್ಯ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ಹಂಚಿಕೊಂಡಿದ್ದಾರೆ. ಇಬ್ಬರಿಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸೂರರೈ ಪೊಟ್ರು ಸಿನಿಮಾದ ಉತ್ತಮ ಅಭಿನಯಕ್ಕೆ ನಟ ಸೂರ್ಯ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಇನ್ನು ನಜ ಅಜಯ್ ದೇವಗನ್ ತಾನ್ಹಾಜಿ ಸಿನಿಮಾದ ಉತ್ತಮ ಅಭಿನಯಕ್ಕೆ ಪ್ರಶಸ್ತಿ ಗೆದ್ದು ಬೀಗಿದರು. ಅತ್ತ್ಯುತ್ತಮ ನಟಿ ಪ್ರಶಸ್ತಿ ಸೂರರೈ ಪೊಟ್ರು ಸಿನಿಮಾದ ನಟಿ ಅಪರ್ಣಾ ಬಲಾಮುರಳಿ ಪಾಲಾಗಿದೆ.

ಸೂರ್ಯ ನಟನೆಯ ಸೂರರೈ ಪೊಟ್ರು ಚಿತ್ರ ಅನೇಕ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದು ಬೀಗಿದೆ.  ಸೂರರೈ ಪೊಟ್ರು ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ಹಿನ್ನೆಲೆ ಸಂಗೀತ ಮತ್ತು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ನಟ ಸೂರ್ಯ ರಾಷ್ಟ್ರ ಮತ್ತು ನಟಿ, ನಿರ್ಮಾಪಕಿ ಜ್ಯೂತಿಕ ಇಬ್ಬರು ತಮ್ಮ ಮಕ್ಕಳು ಹಾಗು ತಮ್ಮ ಕುಟುಂಬದ ಜೊತೆ ರಾಷ್ಟ್ರಪ್ರಶಸ್ತಿ ಹಿಡಿದು ಸಂಭ್ರಮಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟ ಸೂರ್ಯ ಫೋಟೋ ಶೇರ್ ಮಾಡಿ ಎಲ್ಲಾ ವಿನ್ನರ್ಸ್‌ಗೂ ಅಭಿನಂದನೆ ಸಲ್ಲಿಸಿದರು. ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಸೂರ್ಯ ಈ ಪ್ರಶಸ್ತಿ ನಿಮಗೆ ಎಂದು ಹೇಳಿದರು.

andolana

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

1 hour ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

3 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

8 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

8 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

9 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 hours ago