ಚಿತ್ರ ಮಂಜರಿ

69ನೇ ಫಿಲ್ಮ್​ಫೇರ್​ ಅವಾರ್ಡ್: ಅತ್ಯುತ್ತಮ ನಟ ರಣಬೀರ್‌ ಕಪೂರ್‌; ʼ12th ಫೇಲ್’ ಅತ್ಯುತ್ತಮ ಸಿನಿಮಾ

ಗುಜರಾತ್‌: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್​ಫೇರ್​ ಅವಾರ್ಡ್​ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಿದ್ದು, ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟರು.

ಕರೀನಾ ಕಪೂರ್, ಕರಿಷ್ಮಾ ಕಪೂರ್, ವರುಣ್ ಧವನ್, ಕಾರ್ತಿಕ್ ಆರ್ಯನ್ ಸೇರಿ ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ರಲೀಸ್‌ ಆದ ‘12 ಫೇಲ್ ಸಿನಿಮಾ’ ಫಿಲ್ಮ್‌ಪೇರ್‌ ಅವಾರ್ಡ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

‘ಜವಾನ್’, ‘ಪಠಾಣ್’ ಹಾಗೂ ಡಂಕಿ ಸಿನಿಮಾಗಳು ಹಲವು ವಿಭಾಗಗಳಲ್ಲಿ ಆಯ್ಕೆ ಆಗಿತ್ತು. ಆದರೆ, ಗೆಲುವು ಸಿಕ್ಕಿದ್ದು ಕಡಿಮೆ. ‘ಅನಿಮಲ್’ ಸಿನಿಮಾ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಇವೆಲ್ಲವನ್ನು ಮೀರಿದ ‘12 ಫೇಲ್ ಸಿನಿಮಾ’ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಯಾವ ಸಿನಿಮಾ ಯಾವ ವಿಭಾಗದಲ್ಲಿ ಗೆದ್ದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಅತ್ಯುತ್ತಮ ಸಿನಿಮಾ (ಪಾಪ್ಯುಲರ್):‘12th ಫೇಲ್’

ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್): ಜೋರಮ್

ಅತ್ಯುತ್ತಮ ನಿರ್ದೇಶಕ: ವಿಧು ವಿನೋದ್ ಚೋಪ್ರಾ (12th ಫೇಲ್)

ಅತ್ಯುತ್ತಮ ನಟ: ರಣಬೀರ್ ಕಪೂರ್ (ಅನಿಮಲ್)

ಅತ್ಯುತ್ತಮ ನಟ (ಕ್ರಿಟಿಕ್ಸ್): ವಿಕ್ರಾಂತ್ ಮಾಸ್ಸಿ (12th ಫೇಲ್)

ಅತ್ಯುತ್ತಮ ನಟಿ: ಆಲಿಯಾ ಭಟ್ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ನಟಿ (ಕ್ರಿಟಿಕ್ಸ್): ರಾಣಿ ಮುಖರ್ಜಿ (ಮಿಸಸ್ ಚಟರ್ಜಿ Vs ನಾರ್​ವೇ)

ಅತ್ಯುತ್ತಮ ಪೋಷಕ ನಟ: ವಿಕ್ಕಿ ಕೌಶಲ್ (ಡಂಕಿ)

ಅತ್ಯುತ್ತಮ ಪೋಷಕ ನಟಿ: ಶಬಾನ್ ಆಜ್ಮಿ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ಸಾಹಿತ್ಯ: ಅಮಿತಾಭ್ ಭಟ್ಟಾಚಾರ್ಯ (ತೆರೆ ವಾಸ್ತೆ-ಜರ ಹಟ್ಕೆ ಜರ ಬಚ್ಕೆ)

ಅತ್ಯತ್ತಮ ಕಥೆ: ಅಮಿತ್ ರೈ (ಒಎಂಜಿ 2)

andolanait

Recent Posts

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

31 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

55 mins ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

2 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

3 hours ago