ಚಿತ್ರ ಮಂಜರಿ

69ನೇ ಫಿಲ್ಮ್​ಫೇರ್​ ಅವಾರ್ಡ್: ಅತ್ಯುತ್ತಮ ನಟ ರಣಬೀರ್‌ ಕಪೂರ್‌; ʼ12th ಫೇಲ್’ ಅತ್ಯುತ್ತಮ ಸಿನಿಮಾ

ಗುಜರಾತ್‌: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್​ಫೇರ್​ ಅವಾರ್ಡ್​ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಿದ್ದು, ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟರು.

ಕರೀನಾ ಕಪೂರ್, ಕರಿಷ್ಮಾ ಕಪೂರ್, ವರುಣ್ ಧವನ್, ಕಾರ್ತಿಕ್ ಆರ್ಯನ್ ಸೇರಿ ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ರಲೀಸ್‌ ಆದ ‘12 ಫೇಲ್ ಸಿನಿಮಾ’ ಫಿಲ್ಮ್‌ಪೇರ್‌ ಅವಾರ್ಡ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

‘ಜವಾನ್’, ‘ಪಠಾಣ್’ ಹಾಗೂ ಡಂಕಿ ಸಿನಿಮಾಗಳು ಹಲವು ವಿಭಾಗಗಳಲ್ಲಿ ಆಯ್ಕೆ ಆಗಿತ್ತು. ಆದರೆ, ಗೆಲುವು ಸಿಕ್ಕಿದ್ದು ಕಡಿಮೆ. ‘ಅನಿಮಲ್’ ಸಿನಿಮಾ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಇವೆಲ್ಲವನ್ನು ಮೀರಿದ ‘12 ಫೇಲ್ ಸಿನಿಮಾ’ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಯಾವ ಸಿನಿಮಾ ಯಾವ ವಿಭಾಗದಲ್ಲಿ ಗೆದ್ದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಅತ್ಯುತ್ತಮ ಸಿನಿಮಾ (ಪಾಪ್ಯುಲರ್):‘12th ಫೇಲ್’

ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್): ಜೋರಮ್

ಅತ್ಯುತ್ತಮ ನಿರ್ದೇಶಕ: ವಿಧು ವಿನೋದ್ ಚೋಪ್ರಾ (12th ಫೇಲ್)

ಅತ್ಯುತ್ತಮ ನಟ: ರಣಬೀರ್ ಕಪೂರ್ (ಅನಿಮಲ್)

ಅತ್ಯುತ್ತಮ ನಟ (ಕ್ರಿಟಿಕ್ಸ್): ವಿಕ್ರಾಂತ್ ಮಾಸ್ಸಿ (12th ಫೇಲ್)

ಅತ್ಯುತ್ತಮ ನಟಿ: ಆಲಿಯಾ ಭಟ್ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ನಟಿ (ಕ್ರಿಟಿಕ್ಸ್): ರಾಣಿ ಮುಖರ್ಜಿ (ಮಿಸಸ್ ಚಟರ್ಜಿ Vs ನಾರ್​ವೇ)

ಅತ್ಯುತ್ತಮ ಪೋಷಕ ನಟ: ವಿಕ್ಕಿ ಕೌಶಲ್ (ಡಂಕಿ)

ಅತ್ಯುತ್ತಮ ಪೋಷಕ ನಟಿ: ಶಬಾನ್ ಆಜ್ಮಿ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ಸಾಹಿತ್ಯ: ಅಮಿತಾಭ್ ಭಟ್ಟಾಚಾರ್ಯ (ತೆರೆ ವಾಸ್ತೆ-ಜರ ಹಟ್ಕೆ ಜರ ಬಚ್ಕೆ)

ಅತ್ಯತ್ತಮ ಕಥೆ: ಅಮಿತ್ ರೈ (ಒಎಂಜಿ 2)

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

1 hour ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

1 hour ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago