ಚಿತ್ರ ಮಂಜರಿ

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಮುಂಬೈ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್‌ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್‌ ಮಾಡುತ್ತಾರೆ.

ಅಮಿತಾಭ್‌ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್‌ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್‌ ಹೇಳಿದ್ದಾರೆ.

ಅಮಿತಾಭ್‌ ಅವರು ಶೂಟಿಂಗ್‌ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್‌ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್‌ ವೊಬ್ಬರು ಬೈಕ್‌ ನಲ್ಲಿ ಅಮಿತಾಭ್‌ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.

ಅಭಿಮಾನಿಯ ಬೈಕ್‌ ಹಿಂಬದಿಯಲ್ಲಿ ಕೂತು ಅಮಿತಾಭ್‌ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್‌ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್‌ ವೊಂದನ್ನು ಹಾಕಿ ಬಿಗ್‌ ಬಿ ಥ್ಯಾಂಕ್ಯೂ ಹೇಳಿದ್ದಾರೆ.

“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.

ಸದ್ಯ ಅಭಿಮಾನಿಯೊಂದಿಗೆ ಬೈಕ್‌ ಸವಾರಿ ಮಾಡಿದ ಅಮಿತಾಭ್‌ ಅವರ ಫೋಟೋ ವೈರಲ್‌ ಆಗಿದ್ದು, ಬಿಗ್‌ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.

ಅಮಿತಾಭ್‌ ಬಿಗ್‌ ಬಜೆಟ್‌ ʼಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

52 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago