ಮುಂಬೈ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್ ಮಾಡುತ್ತಾರೆ.
ಅಮಿತಾಭ್ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್ ಹೇಳಿದ್ದಾರೆ.
ಅಮಿತಾಭ್ ಅವರು ಶೂಟಿಂಗ್ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್ ವೊಬ್ಬರು ಬೈಕ್ ನಲ್ಲಿ ಅಮಿತಾಭ್ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.
ಅಭಿಮಾನಿಯ ಬೈಕ್ ಹಿಂಬದಿಯಲ್ಲಿ ಕೂತು ಅಮಿತಾಭ್ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್ ವೊಂದನ್ನು ಹಾಕಿ ಬಿಗ್ ಬಿ ಥ್ಯಾಂಕ್ಯೂ ಹೇಳಿದ್ದಾರೆ.
“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.
ಸದ್ಯ ಅಭಿಮಾನಿಯೊಂದಿಗೆ ಬೈಕ್ ಸವಾರಿ ಮಾಡಿದ ಅಮಿತಾಭ್ ಅವರ ಫೋಟೋ ವೈರಲ್ ಆಗಿದ್ದು, ಬಿಗ್ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.
ಅಮಿತಾಭ್ ಬಿಗ್ ಬಜೆಟ್ ʼಪ್ರಾಜೆಕ್ಟ್ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…